ಲಂಕಾ ತಂಡ 
ಕ್ರಿಕೆಟ್

ಶ್ರೀಲಂಕಾ-ಭಾರತ ಕ್ರಿಕೆಟ್ ಸರಣಿಗೆ ಕೋವಿಡ್ ಕರಿನೆರಳು: ಡೇಟಾ ವಿಶ್ಲೇಷಕರಿಗೆ ಸೋಂಕು ದೃಢ!

ಶ್ರೀಲಂಕಾ ಕ್ರಿಕೆಟ್ ತಂಡದ ಡಾಟಾ ವಿಶ್ಲೇಷಕ ಜಿಟಿ ನಿರೋಶನ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಲಂಕಾದಲ್ಲೇ ನಡೆಯಲಿರುವ ಶ್ರೀಲಂಕಾ- ಭಾರತ ನಡುವಿನ ನಿಯಮಿತ ಓವರ್ ಗಳ ಸರಣಿಗೆ ಕರಿನೆರಳು ಆವರಿಸಿದೆ. 

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಡೇಟಾ ವಿಶ್ಲೇಷಕ ಜಿಟಿ ನಿರೋಶನ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಲಂಕಾದಲ್ಲೇ ನಡೆಯಲಿರುವ ಶ್ರೀಲಂಕಾ- ಭಾರತ ನಡುವಿನ ನಿಯಮಿತ ಓವರ್ ಗಳ ಸರಣಿಗೆ ಕರಿನೆರಳು ಆವರಿಸಿದೆ. 

ಶ್ರೀಲಂಕಾ ಕ್ರಿಕೆಟ್ ಮಂಡಳಿ ಜು.09 ರಂದು ಈ ವಿಷಯವನ್ನು ಸ್ಪಷ್ಟಪಡಿಸಿದ್ದು, "ತಂಡದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಗೆ ಕೋವಿಡ್ ಸೋಂಕು ತಗುಲಿದ ಬೆನ್ನಲ್ಲೇ ತಂಡದ ಡಾಟಾ ವಿಶ್ಲೇಷಕರಿಗೂ ಕೋವಿಡ್-19 ಸೋಂಕು ತಗುಲಿದ್ದು ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಹೇಳಿದೆ. 

ರಾಷ್ಟ್ರೀಯ ಆಟಗಾರರು, ಕೋಚ್, ಸಹಾಯಕ ಸಿಬ್ಬಂದಿಗಳಿಗೆ ನಡೆಸಿದ ಪಿಸಿಆರ್ ಪರೀಕ್ಷೆ ವರದಿಯಲ್ಲಿ ಕೊರೋನಾ ಸೋಂಕು ಡೇಟಾ ವಿಶ್ಲೇಷಕರಿಗೆ ತಗುಲಿರುವುದು ದೃಢಪಟ್ಟಿದೆ. 

ಇಂಗ್ಲೆಂಡ್ ಪ್ರವಾಸ ಮುಕ್ತಾಯಗೊಳಿಸಿದ್ದ ಲಂಕಾ ತಂಡ ತವರಿಗೆ ಆಗಮಿಸಿದ 48 ಗಂಟೆಗಳಲ್ಲಿಯೇ ಬ್ಯಾಟಿಂಗ್ ಕೋಚ್ ಗೆ  ಸೋಂಕು ದೃಢಪಟ್ಟಿತ್ತು. ಭಾರತ-ಲಂಕಾ ನಡುವಿನ ಸರಣಿ ಪ್ರಾರಂಭವಾಗುವುದಕ್ಕೆ ಒಂದು ವಾರಕ್ಕೂ ಕಡಿಮೆ ಅವಧಿ ಇದೆ. ಕ್ವಾರಂಟೈನ್ ನಲ್ಲಿರುವ ಇತರ ಆಟಗಾರರಿಗೂ ಟೆಸ್ಟ್ ಮಾಡಿಸಲಾಗಿದೆ. ಲಂಕಾ-ಭಾರತದ ನಡುವೆ ಜು.13 ರಿಂದ ಏಕದಿನ ಸರಣಿ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

SCROLL FOR NEXT