ಟೀಮ್ ಇಂಡಿಯಾ ಆಟಗಾರರು 
ಕ್ರಿಕೆಟ್

ಶ್ರೀಲಂಕಾ ವಿರುದ್ಧದ ಪ್ರಥಮ ಟಿ-20 ಪಂದ್ಯದಲ್ಲಿ ಭಾರತಕ್ಕೆ 38 ರನ್ ಗಳ ಗೆಲುವು

ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪ್ರಥಮ ಟಿ-20 ಪಂದ್ಯದಲ್ಲಿ ಭಾರತ 38 ರನ್ ಗಳಿಂದ ಗೆಲುವು ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್‌ಗಳ ಸಾವಲಿನ ಮೊತ್ತ ಪೇರಿಸಿತು.

ಕೊಲಂಬೊ: ಇಲ್ಲಿನ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪ್ರಥಮ ಟಿ-20 ಪಂದ್ಯದಲ್ಲಿ ಭಾರತ 38 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-0 ಅಂತರದಲ್ಲಿ ಟೀಂ ಇಂಡಿಯಾ ಮುನ್ನಡೆ ಕಾಯ್ದುಕೊಂಡಿದೆ

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್‌ಗಳ ಸವಾಲಿನ ಮೊತ್ತ ಪೇರಿಸಿತು. ಆರಂಭಿಕ ಆಟಗಾರ ಪೃಥ್ವಿ ಶಾ ಶೂನ್ಯಕ್ಕೆ ಔಟಾದರೆ, ಶಿಖರ್ ಧವನ್, 46, ಸಂಜು ಸ್ಯಾಮ್ ಸನ್ 27, ಸೂರ್ಯಕುಮಾರ್ ಯಾದವ್ 50, ಹಾರ್ದಿಕ್ ಪಾಂಡ್ಯ,10,  ಇಶಾನ್ ಕಿಶಾನ್ ಅಜೇಯ 20, ಕೃಣಾಲ್ ಪಾಂಡ್ಯ ಅಜೇಯ 3 ರನ್ ಗಳಿಸಿದರು.

ಟೀಮ್ ಇಂಡಿಯಾ ನೀಡಿದ 164 ರನ್ ಗಳ ಸವಾಲಿನ ಗುರಿ ಬೆನ್ನತ್ತಿದ್ದ ಶ್ರೀಲಂಕಾ ಕೊಂಚ ಹೋರಾಟ ಪ್ರದರ್ಶಿಸಿತಾದರೂ, ಭಾರತ ತಂಡದ ಬಲಿಷ್ಠ ಬೌಲಿಂಗ್‌ ದಾಳಿಯ ಎದುರು 18.3 ಓವರ್‌ಗಳಲ್ಲಿ 126 ರನ್‌ಗಳಿಗೆ ಆಲ್‌ ಔಟ್‌ ಆಯಿತು.

ಟೀಮ್ ಇಂಡಿಯಾ ಪರ ಅದ್ಭುತ ಬೌಲಿಂಗ್‌ ದಾಳಿ ಸಂಘಟಿಸಿದ ಭುವನೇಶ್ವರ್‌ ಕುಮಾರ್‌, 4 ವಿಕೆಟ್‌ ಪಡೆದು ಭಾರತಕ್ಕೆ ಭರ್ಜರಿ ಜಯ ತಂದರು. ಅವರಿಗೆ ಉತ್ತಮ ಸಾಥ್ ನೀಡಿದ ದೀಪಕ್ ಚಹರ್‌ (24ಕ್ಕೆ 2) ಎರಡು ವಿಕೆಟ್‌ ಪಡೆದರು. ಡೆತ್‌ ಓವರ್‌ಗಳಲ್ಲಿ ಮಿಂಚಿದ ಭುವನೇಶ್ವರ್‌ ಕುಮಾರ್‌ಗೆ ಪಂದ್ಯಶ್ರೇಷ್ಠ ಗೌರವ ಲಭ್ಯವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT