ಶ್ರೀಲಂಕಾ ತಂಡದ ಆಟಗಾರರನ್ನು ಅಭಿನಂದಿಸುತ್ತಿರುವ ಟೀಂ ಇಂಡಿಯಾ ನಾಯಕ ಶಿಖರ್ ಧವನ್ 
ಕ್ರಿಕೆಟ್

2ನೇ ಟಿ-20 ಪಂದ್ಯದಲ್ಲಿ ಭಾರತವನ್ನು ನಾಲ್ಕು ವಿಕೆಟ್ ಗಳಿಂದ ಮಣಿಸಿದ ಶ್ರೀಲಂಕಾ

ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಕೊಲಂಬೊ: ಇಲ್ಲಿನ ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಟೀಂ ಇಂಡಿಯಾ ಪರ  ಋತುರಾಜ್ ಗಾಯಕ್ವಾಡ್, 21, ಶಿಖರ್ ಧವನ್ 40,  ದೇವದತ್ ಪಡ್ಡಿಕಲ್ 29, ನಿತೀಶ್ ರಾಣಾ 9 ರನ್ ಗಳಿಸಿದರು.

ಭಾರತ ನೀಡಿದ 132 ರನ್ ಗಳ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ ತಂಡದ ಪರ ಅವಿಷ್ಕಾ ಫರ್ನಾಂಡೋ 11, ಮಿನೊದ್ ಬಾನುಕಾ 36, ಸದೀರಾ ಸಮರ ವಿಕ್ರಮ 8, ದಾಸೂನ್ ಶಾನಕಾ 3, ಧನಂಜಯ ಡಿ  ಸಿಲ್ವಾ 40 , ವಾನಿಂದು ಹಸರಂಗ 15, ರಮೇಶ್ ಮೆಂಡಿಸ್ 2, ಚಾಮಿಕಾ ಕರುಣರತ್ನೆ 12 ರನ್ ಗಳಿಸುವ ಮೂಲಕ ಶ್ರೀಲಂಕಾ ಆರು ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು. ಶ್ರೀಲಂಕಾ ಪರ 40 ರನ್ ಗಳಿಸಿದ ಧನಂಜಯ ಡಿ ಸಿಲ್ವಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT