ಶ್ರೀಲಂಕಾ ತಂಡದ ಆಟಗಾರರನ್ನು ಅಭಿನಂದಿಸುತ್ತಿರುವ ಟೀಂ ಇಂಡಿಯಾ ನಾಯಕ ಶಿಖರ್ ಧವನ್ 
ಕ್ರಿಕೆಟ್

2ನೇ ಟಿ-20 ಪಂದ್ಯದಲ್ಲಿ ಭಾರತವನ್ನು ನಾಲ್ಕು ವಿಕೆಟ್ ಗಳಿಂದ ಮಣಿಸಿದ ಶ್ರೀಲಂಕಾ

ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಕೊಲಂಬೊ: ಇಲ್ಲಿನ ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಉಭಯ ತಂಡಗಳು 1-1 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಟೀಂ ಇಂಡಿಯಾ ಪರ  ಋತುರಾಜ್ ಗಾಯಕ್ವಾಡ್, 21, ಶಿಖರ್ ಧವನ್ 40,  ದೇವದತ್ ಪಡ್ಡಿಕಲ್ 29, ನಿತೀಶ್ ರಾಣಾ 9 ರನ್ ಗಳಿಸಿದರು.

ಭಾರತ ನೀಡಿದ 132 ರನ್ ಗಳ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ ತಂಡದ ಪರ ಅವಿಷ್ಕಾ ಫರ್ನಾಂಡೋ 11, ಮಿನೊದ್ ಬಾನುಕಾ 36, ಸದೀರಾ ಸಮರ ವಿಕ್ರಮ 8, ದಾಸೂನ್ ಶಾನಕಾ 3, ಧನಂಜಯ ಡಿ  ಸಿಲ್ವಾ 40 , ವಾನಿಂದು ಹಸರಂಗ 15, ರಮೇಶ್ ಮೆಂಡಿಸ್ 2, ಚಾಮಿಕಾ ಕರುಣರತ್ನೆ 12 ರನ್ ಗಳಿಸುವ ಮೂಲಕ ಶ್ರೀಲಂಕಾ ಆರು ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು. ಶ್ರೀಲಂಕಾ ಪರ 40 ರನ್ ಗಳಿಸಿದ ಧನಂಜಯ ಡಿ ಸಿಲ್ವಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT