ವಿಕೆಟ್ ಪಡೆದು ಸಂಭ್ರಮಿಸುತ್ತಿರುವ ಲಂಕಾ ಆಟಗಾರರು 
ಕ್ರಿಕೆಟ್

ಲಂಕಾ ವಿರುದ್ಧದ ಅಂತಿಮ ಟಿ-20 ಪಂದ್ಯ: ಪ್ರಮುಖ 5 ವಿಕೆಟ್ ಕಳೆದುಕೊಂಡ ಭಾರತಕ್ಕೆ ಆರಂಭಿಕ ಆಘಾತ

ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಅಂತಿಮ ಟಿ-20 ಪಂದ್ಯದಲ್ಲಿ ಪ್ರಮುಖ ಐದು ವಿಕೆಟ್ ಗಳನ್ನು ಕಳೆದುಕೊಂಡ ಭಾರತ, ಆರಂಭಿಕ ಆಘಾತ ಅನುಭವಿಸಿದೆ. 

ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಅಂತಿಮ ಟಿ-20 ಪಂದ್ಯದಲ್ಲಿ  ಪ್ರಮುಖ ಐದು ವಿಕೆಟ್ ಗಳನ್ನು ಕಳೆದುಕೊಂಡ ಭಾರತ, ಆರಂಭಿಕ ಆಘಾತ ಅನುಭವಿಸಿದೆ. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಕ್ಕೆ ಎರಡನೇ ಓವರ್ ನಲ್ಲೇ ದೊಡ್ಡ ಆಘಾತ ಎದುರಾಯಿತು. 12 ರನ್ ಗಳಿಸುವಷ್ಟರಲ್ಲಿ ಚಾಮೀರಾ ದೊಡ್ಡ ವಿಕೆಟ್ ಪಡೆದುಕೊಂಡರು. ಟೀಂ ಇಂಡಿಯಾ ನಾಯಕ ಶಿಖರ್ ಧವನ್ ಶೂನ್ಯಕ್ಕೆ ಔಟಾದರು. ನಂತರ ಬಂದ ದೇವದತ್ತ ಪಡಿಕ್ಕಲ್ ಕೂಡಾ ಕೇವಲ 9 ರನ್ ಗಳಿಸುವಷ್ಟರಲ್ಲಿ ರನ್ ಔಟ್ ಆಗಿ ಫೆವಿಲಿಯನ್ ನತ್ತ ಹೆಜ್ಜೆ ಹಾಕಿದರು. 

ತದ ನಂತರ ಋತುರಾಜ್ ಗಾಯಕ್ವಾಡ್ 14 ರನ್ ಗಳಿಸಿ ಹಸರಂಗ ಬೌಲಿಂಗ್ ನಲ್ಲಿ ಎಲ್ ಬಿಡಬ್ಲ್ಯೂ ಗೆ ಬಲಿಯಾದರು.  ಸಂಜು ಸ್ಯಾಮ್ಸನ್ ಕೂಡಾ ಹಸರಂಗ ಬೌಲಿಂಗ್ ನಲ್ಲಿ ಎಲ್ ಬಿಡಬ್ಲ್ಯೂಗೆ ಬಲಿಯಾದರು. ನಂತರ ನಿತೀಶ್ ರಾಣಾ ಕೂಡಾ ಕೇವಲ 6 ರನ್ ಗಳಿಸಿ ಔಟಾದರು. ಟೀಂ ಇಂಡಿಯಾ ಇದೇ ರೀತಿಯ ಕೆಟ್ಟ ಪ್ರದರ್ಶನ ಮುಂದುವರೆಸಿದರೆ ಸೋಲು ಕಟ್ಟಿಟ್ಟ ಬುತ್ತಿಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT