ಕೊಹ್ಲಿ-ಅನುಷ್ಕಾ 
ಕ್ರಿಕೆಟ್

ಇಂಗ್ಲೆಂಡ್ ಪ್ರವಾಸ: ಕುಟುಂಬದೊಂದಿಗೆ ತೆರಳಲು ಟೀಮ್ ಇಂಡಿಯಾ ಆಟಗಾರರಿಗೆ ಬ್ರಿಟನ್ ಸರ್ಕಾರ ಅನುಮತಿ

ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿರುವ ಭಾರತ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಆಟಗಾರರು ಮತ್ತು ಕೋಚಿಂಗ್ ಹಾಗೂ ಸಹಾಯಕ ಸಿಬ್ಬಂದಿಗೆ ಕುಟುಂಬದವರನ್ನು ಕರೆದುಕೊಂಡು ಹೋಗಲು ಬ್ರಿಟನ್ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.

ಮುಂಬೈ: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿರುವ ಭಾರತ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಆಟಗಾರರು ಮತ್ತು ಕೋಚಿಂಗ್ ಹಾಗೂ ಸಹಾಯಕ ಸಿಬ್ಬಂದಿಗೆ ಕುಟುಂಬದವರನ್ನು ಕರೆದುಕೊಂಡು ಹೋಗಲು ಬ್ರಿಟನ್ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.

ಹೌದು.. ಇಂಗ್ಲೆಂಡ್ ಪ್ರವಾಸಕ್ಕೆ ಕುಟುಂಬಗಳನ್ನು ಕರೆತರುವ ಬಿಸಿಸಿಐ ಮನವಿಗೆ ಬ್ರಿಟನ್ ಸರ್ಕಾರ ಅನುಮತಿ ನೀಡಿದ್ದು, ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿರುವ ಭಾರತ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಆಟಗಾರರು ಮತ್ತು ಕೋಚಿಂಗ್ ಹಾಗೂ ಸಹಾಯಕ ಸಿಬ್ಬಂದಿಗೆ ಕುಟುಂಬದವರನ್ನು ಕರೆದುಕೊಂಡು  ಹೋಗಲು ಅನುಮತಿ ನೀಡಿದೆ.

ಭಾರತ ಪುರುಷ ತಂಡವು ನಾಲ್ಕು ತಿಂಗಳ ಕಾಲ ಪ್ರವಾಸದಲ್ಲಿರಲಿದ್ದು, ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿ ಪ್ರಾರಂಭಿಸುವ ಮೊದಲು ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆಡಲಿದೆ. ಮಹಿಳಾ ತಂಡವು ಒಂದು ಟೆಸ್ಟ್ ಆಡಲಿದ್ದು, ನಂತರ ಮೂರು ಏಕದಿನ ಮತ್ತು ಮೂರು ಟಿ 20  ಪಂದ್ಯಗಳನ್ನು ಆಡಲಿದೆ. ಪುರುಷರ ಮತ್ತು ಮಹಿಳಾ ತಂಡಗಳ ಕುಟುಂಬಗಳು ಚಾರ್ಟರ್ ಫ್ಲೈಟ್‌ನಲ್ಲಿ ತೆರಳಲಿದ್ದು, ಜೂನ್ 3 ರಂದು ಲಂಡನ್‌ ತಲುಪಲಿವೆ. ಅಲ್ಲಿಂದ, ಎರಡೂ ತಂಡಗಳು ಸೌತಾಂಪ್ಟನ್‌ಗೆ ಸ್ಥಳಾಂತರಗೊಳ್ಳುತ್ತವೆ, ಅಲ್ಲಿ ಅವರು ಕ್ವಾರಂಟೈವ್ ಪ್ರಕ್ರಿಯೆ ಪೂರೈಸುತ್ತಾರೆ.

ನಂತರ, ಭಾರತದ ಮಹಿಳೆಯರ ತಂಡವು ಇಂಗ್ಲೆಂಡ್ ವಿರುದ್ಧದ ಏಕದಿನ, ಟೆಸ್ಟ್ ಪಂದ್ಯ ನಡೆಯುವ ಸ್ಥಳವಾದ ಬ್ರಿಸ್ಟಲ್‌ಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. 

ಇನ್ನು ಪುರುಷರ ತಂಡವು ಸೌತಾಂಪ್ಟನ್‌ನ ಏಗಾಸ್ ಬೌಲ್‌ನಲ್ಲಿ ಕ್ಯಾರಂಟೈನ್ ನಂತರದಲ್ಲಿ ನಿಯಂತ್ರಿತ ತರಬೇತಿಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಪ್ರಸ್ತುತ ಎರಡೂ ತಂಡಗಳು ಮುಂಬೈನ ಒಂದೇ ಹೋಟೆಲ್‌ನಲ್ಲಿ ಎರಡು ವಾರಗಳ ಕ್ವಾರಂಟೈನ್‌ನಲ್ಲಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel