ಐಸಿಸಿ ಲೊಗೋ 
ಕ್ರಿಕೆಟ್

ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಶಿಪ್ ವಿಜೇತರಿಗೆ ಟ್ರೋಫಿಯೊಂದಿಗೆ 1.6 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ: ಐಸಿಸಿ

ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ವಿಜೇತರಾದವರಿಗೆ ಚಾಂಪಿಯನ್ ಶಿಫ್ ಟ್ರೋಫಿಯೊಂದಿಗೆ 1.6 ಮಿಲಿಯನ್ ಅಮೆರಿಕನ್ ಡಾಲರ್  ಹಣವನ್ನು ಬಹುಮಾನವಾಗಿ ನೀಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಸೋಮವಾರ ತಿಳಿಸಿದೆ.

ದುಬೈ: ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ವಿಜೇತರಾದವರಿಗೆ ಚಾಂಪಿಯನ್ ಶಿಫ್ ಟ್ರೋಫಿಯೊಂದಿಗೆ 1.6 ಮಿಲಿಯನ್ ಅಮೆರಿಕನ್ ಡಾಲರ್  ಹಣವನ್ನು ಬಹುಮಾನವಾಗಿ ನೀಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಸೋಮವಾರ ತಿಳಿಸಿದೆ. ಸೌತಂಪ್ಟನ್ ನಲ್ಲಿ ಜೂನ್ 18 ರಂದು ಈ ಪ್ರತಿಷ್ಟಿತ ಪ್ರಶಸ್ತಿಗಾಗಿ ಭಾರತ ಮತ್ತು ನ್ಯೂಜಿಲೆಂಡ್ ಸೆಣಸಲಿವೆ.

ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದಲ್ಲಿ ವಿಜೇತರಾದವರು, ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿಯೊಂದಿಗೆ 1.6 ಮಿಲಿಯನ್ ಡಾಲರ್ ಮೊತ್ತದ ಬಹುಮಾನದ ಹಣವನ್ನು ಪಡೆಯಲಿದ್ದಾರೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಒಂಬತ್ತು ತಂಡಗಳ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆಯುವ ತಂಡ 800,000 ಅಮೆರಿಕನ್ ಡಾಲರ್, ಮೂರನೇ ಸ್ಥಾನದ ತಂಡ 450,000 ಅಮೆರಿಕನ್ ಡಾಲರ್ ಹಾಗೂ ನಾಲ್ಕನೇ ಸ್ಥಾನದ ತಂಡ 350,000 ಅಮೆರಿಕನ್ ಡಾಲರ್, ಐದನೇ ಸ್ಥಾನ ಪಡೆದ ತಂಡ 200,000 ಅಮೆರಿಕನ್ ಡಾಲರ್  ಹಣವನ್ನು ಪಡೆದರೆ, ಉಳಿದ ನಾಲ್ಕು ತಂಡಗಳು ತಲಾ 100,000 ಅಮೆರಿಕನ್ ಡಾಲರ್ ಪಡೆಯಲಿವೆ ಎಂದು ಐಸಿಸಿ ಹೇಳಿದೆ.

ಧೀರ್ಘ ಟೆಸ್ಟ್ ಕ್ರಿಕೆಟ್ ನಲ್ಲಿ ಸುಮಾರು 9 ತಂಡಗಳು ಸುಮಾರು ಎರಡು ವರ್ಷಗಳ ಕಾಲ ಸ್ಪರ್ಧಿಸಿವೆ. ಒಂದು ವೇಳೆ ಫೈನಲ್ ಪಂದ್ಯ ಡ್ರಾ ಆದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಸಮಾನವಾಗಿ ಪ್ರಶಸ್ತಿ ಹಣವನ್ನು ಹಂಚಲಾಗುವುದು ಎಂದು ಐಸಿಸಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT