ಬಿ ವಿಜಯಕೃಷ್ಣ 
ಕ್ರಿಕೆಟ್

ಕರ್ನಾಟಕ ಮಾಜಿ ಎಡಗೈ ಸ್ಪಿನ್ನರ್ ಬಿ. ವಿಜಯಕೃಷ್ಣ ನಿಧನ

ಕರ್ನಾಟಕದ ಮಾಜಿ ಕ್ರಿಕೆಟಿಗ, ಡಗೈ ಸ್ಪಿನ್ನರ್ ಬಿ. ವಿಜಯಕೃಷ್ಣ (71) ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ನಿಧನರಾದರು.

ಬೆಂಗಳೂರು: ಕರ್ನಾಟಕದ ಮಾಜಿ ಕ್ರಿಕೆಟಿಗ, ಡಗೈ ಸ್ಪಿನ್ನರ್ ಬಿ. ವಿಜಯಕೃಷ್ಣ (71) ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ನಿಧನರಾದರು.

ರಣಜಿ ಕ್ರಿಕೆಟ್ ನ ಖ್ಯಾತಿಯ ವಿಜಯಕೃಷ್ಣ ಬಹು ಅಂಗಾಂಗಗಳ ವೈಫಲ್ಯದಿಂದ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಕುಮಾರ ಪಾರ್ಕ್ ನಲ್ಲಿ ವಾಸಿಸುತ್ತಿದ್ದ ಮೃತರ ಅಂತ್ಯಕ್ರಿಯೆ ಇಂದು 4 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ

ವಿಜಯಕೃಷ್ಣ 15 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಆಲ್ ರೌಂಡರ್ ಎನಿಸಿದ್ದು 198 ವಿಕೆಟ್ ಹಾಗೂ ಸುಮಾರು 2000 ರನ್ ಗಳನ್ನು ಗಳಿಸಿದ್ದರು.

ಮುಖ್ಯಮಂತ್ರಿ ಸಂತಾಪ

ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ 2 ಬಾರಿ ರಣಜಿ ಟ್ರೋಫಿ ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನದಿಂದ ನಾಡು ಒಬ್ಬ ಅತ್ಯುತ್ತಮ ಕ್ರಿಕೆಟ್ ಆಟಗಾರನನ್ನು ಕಳೆದುಕೊಂಡಂತಾಗಿದೆ.

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್‌ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

SCROLL FOR NEXT