ಕೆಎಲ್ ರಾಹುಲ್ 
ಕ್ರಿಕೆಟ್

ತೀವ್ರ ಹೊಟ್ಟೆ ನೋವು: ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲು, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ

ಐಪಿಎಲ್ ಟೂರ್ನಿಯ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಟೂರ್ನಿ ಮಧ್ಯೆಯೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಹಮದಾಬಾದ್: ಐಪಿಎಲ್ ಟೂರ್ನಿಯ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಟೂರ್ನಿ ಮಧ್ಯೆಯೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಲಗಳ ಪ್ರಕಾರ ಕೆಎಲ್ ರಾಹುಲ್ ಅವರು ಕರಳು ಸಂಬಂಧಿ ಬೇನೆ (acute appendicitis)ಯಿಂದ ಬಳಲುತ್ತಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ನಡೆದ ವೈದ್ಯಕೀಯ ತಪಾಸಣೆ ಬಳಿಕ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಹಾಲಿ ಐಪಿಎಲ್ ಟೂರ್ನಿಗೆ ಅಲಭ್ಯರಾಗುವ ಸಾಧ್ಯತೆ ಇದೆ. 

ಹಾಲಿ ಐಪಿಎಲ್ ಟೂರ್ನಿಯ 29ನೇ ಲೀಗ್ ಪಂದ್ಯಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸಜ್ಜಾಗಿದೆ. ಈ ಮಹತ್ವದ ಪಂದ್ಯಕ್ಕೆ ಸಜ್ಜಾಗುತ್ತಿದ್ದ ಕೆಎಲ್ ರಾಹುಲ್‌ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆ ನೋವು ಹೆಚ್ಚಾದ ಕಾರಣ  ಎಮೆರ್ಜೆನ್ಸಿ ಘಟಕಕ್ಕೆ ದಾಖಲಿಸಲಾಗಿತ್ತು. ಕೆಲ ಪರೀಕ್ಷೆಗಳ ಬಳಿಕ ರಾಹುಲ್ ಅಪೆಂಡಿಕ್ಸ್ ಸಮಸ್ಯೆಗೆ ತುತ್ತಾಗಿರುವುದು ದೃಢಪಟ್ಟಿದೆ. 

ರಾಹುಲ್ ಅನಾರೋಗ್ಯ ಕುರಿತು ಪಂಜಾಬ್ ಕಿಂಗ್ಸ್ ಸಾಮಾಜಿಕ ಜಾಲತಾಣದಲ್ಲಿ ಖಚಿತ ಪಡಿಸಿದೆ. ಇಷ್ಟೇ ಅಲ್ಲ, ಶಸ್ತ್ರ ಚಿಕಿತ್ಸೆ ಮೂಲಕ ರಾಹುಲ್ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದಿದೆ. ರಾಹುಲ್ ಆಸ್ಪತ್ರೆ ದಾಖಲಿಸುವ ವೇಳೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಕೆಎಲ್ ರಾಹುಲ್‌ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ರಾಹುಲ್ ಲಭ್ಯತೆ ಕುರಿತು ಪಂಜಾಬ್ ಯಾವುದೇ ಖಚಿತ ಮಾಹಿತಿ ಬಹಿರಂಗ ಪಡಿಸಿಲ್ಲ. ಇಷ್ಟೇ ದೆಹಲಿ ವಿರುದ್ಧ ತಂಡ ರಾಹುಲ್ ಅಲಭ್ಯತೆಯಲ್ಲಿ ಮತ್ತೊರ್ವ ಕನ್ನಡಿಗ ಮಯಾಂಕ್ ಅಗರ್ವಾಲ್ ತಂಡವನ್ನು ಮುನ್ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT