ಆರ್ಸಿಬಿ 
ಕ್ರಿಕೆಟ್

ಮಧ್ಯದಲ್ಲೇ ಐಪಿಎಲ್ ತೊರೆದು ತವರಿಗೆ ಹಾರಲು ಮುಂದಾಗಿದ್ದ ಆಸ್ಟ್ರೇಲಿಯಾ ಆಟಗಾರರ ಯೋಜನೆಗೆ ತಣ್ಣೀರು!

ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಮಧ್ಯದಲ್ಲಿ ತೊರೆದು ತವರಿಗೆ ಹಾರಲು ಮುಂದಾಗಿದ್ದ ಆಸ್ಟ್ರೇಲಿಯಾ ಆಟಗಾರರ ಆಸೆಗೆ ಪೆಟ್ಟು ಬಿದ್ದಿದೆ. 

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಮಧ್ಯದಲ್ಲಿ ತೊರೆದು ತವರಿಗೆ ಹಾರಲು ಮುಂದಾಗಿದ್ದ ಆಸ್ಟ್ರೇಲಿಯಾ ಆಟಗಾರರ ಆಸೆಗೆ ಪೆಟ್ಟು ಬಿದ್ದಿದೆ. 

ಕ್ರಿಕೆಟ್ ಆಸ್ಟ್ರೇಲಿಯಾ ತಮ್ಮ ಆಟಗಾರರನ್ನು ಕರಿಸಿಕೊಳ್ಳಲು ವಿಶೇಷ ವಿಮಾನಗಳ ಯೋಜನೆ ಮಾಡಿಲ್ಲ. ಇನ್ನು ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಹಿನ್ನೆಲೆ ಆಸ್ಟ್ರೇಲಿಯಾ ಮೇ 15ರವರೆಗೆ ಭಾರತದಿಂದ ಬರುವ ಎಲ್ಲ ವಿಮಾನಗಳನ್ನು ರದ್ದು ಮಾಡಿದೆ.

'ಸದ್ಯ ಯಾವುದೇ ವಿಶೇಷ ವಿಮಾನಗಳನ್ನು ಓಡಿಸುವ ಯೋಜನೆ ಇಲ್ಲ. ನಾವು ಬಿಸಿಸಿಐ ಹಾಗೂ ಆಟಗಾರರೊಂದಿಗೆ ಸತತ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದೇವೆ' ಎಂದು ಸಿಎ ಮಧ್ಯಂತರ ಸಿಇಒ ನಿಕ್ ಹಾಕ್ಲಿ ತಿಳಿಸಿದ್ದಾರೆ.

'ಬಿಸಿಸಿಐ ನಿರ್ಮಿಸಿದ ಬಯೊ-ಬಬಲ್ ವ್ಯವಸ್ಥೆಯಲ್ಲಿ ಆಟಗಾರರು ಆರೋಗ್ಯವಾಗಿದ್ದಾರೆ. ನಾವು ಮಾತನಾಡಿದ ಆಟಗಾರರು ತಮ್ಮ ಕ್ರೀಡಾ ಬದ್ಧತೆಯನ್ನು ಮೆರೆದಿದ್ದಾರೆ. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಿಸಿಸಿಐ ಜೊತೆ ಸಂಪರ್ಕದಲ್ಲಿದ್ದೇವೆ' ಎಂದು ಹಾಕ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT