ಕಾನ್ಪುರ: ಭಾರತ ಕ್ರಿಕೆಟ್ ತಂಡದ ಕ್ರಿಕೆಟಿಗ ಕುಲದೀಪ್ ಯಾದವ್ ತಮ್ಮ ಗೆಸ್ಟ್ ಹೌಸ್ ನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಕಾನ್ಪುರ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.
ಕ್ರಿಕೆಟಿಗ ಕುಲದೀಪ್ ಯಾದವ್ ಅವರಿಗೆ ಸ್ಲಾಟ್ ಕಾಯ್ದಿರಿಸಿದ ಆಸ್ಪತ್ರೆಯಲ್ಲಿ ಅಲ್ಲದೇ ಅತಿಥಿ ಗೃಹದಲ್ಲಿ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾನ್ಪುರ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಕಳೆದ ಶನಿವಾರ ಕ್ರಿಕೆಟಿಗ ಕುಲದೀಪ್ ಯಾದವ್ ಅವರು, ಕೋವಿಡ್ ಲಸಿಕೆ ಪಡೆದಿದ್ದರು. ಈ ಬಗ್ಗೆ ಸ್ವತಃ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಕೂಡ ಅಪ್ಲೋಡ್ ಮಾಡಿದ್ದರು. ಅಲ್ಲದೆ ಕೊರೋನಾ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಎಂದು ಹೇಳಿದ್ದರು. ಈ ಫೋಟೋ ವ್ಯಾಪಕ ಟೀಕೆಗೆ ಗುರಿಯಾಗಿತ್ತು.
जब भी मौका मिले तुरंत टीका लगवाएं। सुरक्षित रहें क्योंकि covid19 के खिलाफ लड़ाई में एकजुट होने की आवश्यकता है