ಮಾರ್ಕ್ ಬೌಚರ್ ಮತ್ತು ಎಬಿಡಿ 
ಕ್ರಿಕೆಟ್

'ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ನನಗೆ ಮನಸ್ಸಿಲ್ಲ'; ಅಭಿಮಾನಿಗಳಿಗೆ ಶಾಕ್ ಕೊಟ್ಟ 'ಎಬಿಡಿ'

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ಕೇಪ್ ಟೌನ್: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ಹೌದು.. ಈ ಬಗ್ಗೆ ಸ್ವತಃ ದಕ್ಷಿಣ ಆಫ್ರಿಕಾದ ಪ್ರಧಾನ ಕೋಚ್ ಮಾರ್ಕ್ ಬೌಚರ್ ಮಾಹಿತಿ ನೀಡಿದ್ದು, 'ಡಿವಿಲಿಯರ್ಸ್ ಇನ್ನೂ ವಿಶ್ವದ ಅತ್ಯುತ್ತಮ ಟಿ 20 ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಅಂತಾರಾಷ್ಟ್ರೀಯ ನಿವೃತ್ತಿಯಿಂದ ಹಿಂದಿರುಗುವ ಮೂಲಕ ಟಿ 20 ವಿಶ್ವಕಪ್‌ಗೆ  ಮರಳದಿರಲು ಅವರ ಬಳಿ ಸಾಕಷ್ಟು ಕಾರಣಗಳಿವೆ. ಕೆಲವು ದಿನಗಳಿಂದ ತಂಡದ ಭಾಗವಾಗಿರುವ ಯಾವುದೇ ಆಟಗಾರನ ಸ್ಥಾನವನ್ನು ಕಿತ್ತುಕೊಳ್ಳಲು ಎಬಿಡಿ ಅವರಿಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ದಿ ಸಿಟಿಜನ್ ವೆಬ್‌ಸೈಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಂಡದಲ್ಲಿ ಮತ್ತೊಬ್ಬ ಆಟಗಾರನ ಸ್ಥಾನಕ್ಕೆ ಕುತ್ತು ತರಲು ಅಥವಾ ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ಎಬಿಡಿಗೆ ಮನಸ್ಸಿಲ್ಲ. ಹೀಗಾಗಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಘೋಷಣೆ ಮಾಡಿರುವ ನಿವೃತ್ತಿಗೆ ಬದ್ಧರಾಗಿದ್ದಾರೆ.  ಅವರು ಪ್ರಸ್ತುತ ನಿರ್ಧಾರ ಬದಲಿಸಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ. 

ಅಂತೆಯೇ ತಂಡದ ಸಂಯೋಜನೆಯನ್ನು ಹಾಳುಮಾಡಲು ಡಿವಿಲಿಯರ್ಸ್ ಬಯಸುವುದಿಲ್ಲ ಆದ್ದರಿಂದ ಅವರು ಈ ನಿರ್ಧಾರಕ್ಕೆ ಅವರು ಬಂದಿದ್ದಾರೆ. ತರಬೇತುದಾರನಾಗಿ, ನನ್ನ ಅತ್ಯುತ್ತಮ ಆಟಗಾರರನ್ನು ತಂಡಕ್ಕೆ ತರಲು ನಾನು ಪ್ರಯತ್ನಿಸಬೇಕು. ಎಬಿಡಿಗೆ ಎಂತಹದೆ ತಂಡವನ್ನು ಬಲಿಷ್ಠಗೊಳಿಸುವ  ಸಾಮರ್ಥ್ಯವಿದೆ. ಆದರೆ ಅವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಬೌಚರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT