ಮಾರ್ಕ್ ಬೌಚರ್ ಮತ್ತು ಎಬಿಡಿ 
ಕ್ರಿಕೆಟ್

'ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ನನಗೆ ಮನಸ್ಸಿಲ್ಲ'; ಅಭಿಮಾನಿಗಳಿಗೆ ಶಾಕ್ ಕೊಟ್ಟ 'ಎಬಿಡಿ'

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ಕೇಪ್ ಟೌನ್: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

ಹೌದು.. ಈ ಬಗ್ಗೆ ಸ್ವತಃ ದಕ್ಷಿಣ ಆಫ್ರಿಕಾದ ಪ್ರಧಾನ ಕೋಚ್ ಮಾರ್ಕ್ ಬೌಚರ್ ಮಾಹಿತಿ ನೀಡಿದ್ದು, 'ಡಿವಿಲಿಯರ್ಸ್ ಇನ್ನೂ ವಿಶ್ವದ ಅತ್ಯುತ್ತಮ ಟಿ 20 ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಅಂತಾರಾಷ್ಟ್ರೀಯ ನಿವೃತ್ತಿಯಿಂದ ಹಿಂದಿರುಗುವ ಮೂಲಕ ಟಿ 20 ವಿಶ್ವಕಪ್‌ಗೆ  ಮರಳದಿರಲು ಅವರ ಬಳಿ ಸಾಕಷ್ಟು ಕಾರಣಗಳಿವೆ. ಕೆಲವು ದಿನಗಳಿಂದ ತಂಡದ ಭಾಗವಾಗಿರುವ ಯಾವುದೇ ಆಟಗಾರನ ಸ್ಥಾನವನ್ನು ಕಿತ್ತುಕೊಳ್ಳಲು ಎಬಿಡಿ ಅವರಿಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ದಿ ಸಿಟಿಜನ್ ವೆಬ್‌ಸೈಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಂಡದಲ್ಲಿ ಮತ್ತೊಬ್ಬ ಆಟಗಾರನ ಸ್ಥಾನಕ್ಕೆ ಕುತ್ತು ತರಲು ಅಥವಾ ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ಎಬಿಡಿಗೆ ಮನಸ್ಸಿಲ್ಲ. ಹೀಗಾಗಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಘೋಷಣೆ ಮಾಡಿರುವ ನಿವೃತ್ತಿಗೆ ಬದ್ಧರಾಗಿದ್ದಾರೆ.  ಅವರು ಪ್ರಸ್ತುತ ನಿರ್ಧಾರ ಬದಲಿಸಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ. 

ಅಂತೆಯೇ ತಂಡದ ಸಂಯೋಜನೆಯನ್ನು ಹಾಳುಮಾಡಲು ಡಿವಿಲಿಯರ್ಸ್ ಬಯಸುವುದಿಲ್ಲ ಆದ್ದರಿಂದ ಅವರು ಈ ನಿರ್ಧಾರಕ್ಕೆ ಅವರು ಬಂದಿದ್ದಾರೆ. ತರಬೇತುದಾರನಾಗಿ, ನನ್ನ ಅತ್ಯುತ್ತಮ ಆಟಗಾರರನ್ನು ತಂಡಕ್ಕೆ ತರಲು ನಾನು ಪ್ರಯತ್ನಿಸಬೇಕು. ಎಬಿಡಿಗೆ ಎಂತಹದೆ ತಂಡವನ್ನು ಬಲಿಷ್ಠಗೊಳಿಸುವ  ಸಾಮರ್ಥ್ಯವಿದೆ. ಆದರೆ ಅವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಬೌಚರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT