ಏಷ್ಯಾ ಕಪ್ 
ಕ್ರಿಕೆಟ್

ವೇಳಾಪಟ್ಟಿ 'ಸಂಪೂರ್ಣ ಭರ್ತಿ'ಯಿಂದಾಗಿ 2021ರ ಏಷ್ಯಾ ಕಪ್ ಟೂರ್ನಿ 2023ಕ್ಕೆ ಮುಂದೂಡಿಕೆ

ಕೊರೋನಾ ಮಹಾಮಾರಿಯಿಂದ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿಯಲ್ಲಿ ನಿರಂತರ ಬದಲಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ 2021ರ ಏಷ್ಯಾಕಪ್ ಟೂರ್ನಿಯನ್ನು 2023ಕ್ಕೆ ಮುಂದೂಡಲಾಗಿದೆ.

ದುಬೈ: ಕೊರೋನಾ ಮಹಾಮಾರಿಯಿಂದ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿಯಲ್ಲಿ ನಿರಂತರ ಬದಲಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ 2021ರ ಏಷ್ಯಾಕಪ್ ಟೂರ್ನಿಯನ್ನು 2023ಕ್ಕೆ ಮುಂದೂಡಲಾಗಿದೆ. 

ಈ ವರ್ಷದ ಕಾಂಟಿನೆಂಟಲ್ ಪಂದ್ಯಾವಳಿಯನ್ನು ಪಾಕಿಸ್ತಾನದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಲಾಯಿತು. ಆದರೆ ದ್ವೀಪ ರಾಷ್ಟ್ರ ಲಂಕಾದಲ್ಲೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟೂರ್ನಿ ರದ್ದತಿಗೆ ಕಾರಣವಾಗಿವೆ. ಏಷ್ಯಾಕಪ್ ಆಡಲಿರುವ ಎಲ್ಲಾ ನಾಲ್ಕು ತಂಡಗಳ ವೇಳಾಪಟ್ಟಿ ವರ್ಷದ ಅಂತ್ಯದವರೆಗೆ ನಿಗದಿಯಾಗಿರುವುದರಿಂದ ಈ ವರ್ಷ ಪಂದ್ಯಾವಳಿಗಾಗಿ ವೇಳಾಪಟ್ಟಿ ಹೊಂದಿಸುವುದು ತುಂಬಾ ಕಷ್ಟಕರವಾಗಿದೆ  ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ) ಈ ನಿಟ್ಟಿನಲ್ಲಿ ಹೇಳಿಕೆ ನೀಡಿತ್ತು

"ಮಂಡಳಿಯು ಈ ವಿಷಯವನ್ನು ಬಹಳ ಎಚ್ಚರಿಕೆಯಿಂದ ಪರಿಗಣಿಸಿದ್ದು ಟೂರ್ನಿಯನ್ನು ಮುಂದೂಡುವುದು ಮುಂದಿನ ಮಾರ್ಗವಾಗಿದೆ ಎಂದು ನಿರ್ಧರಿಸಿದೆ. ಆದ್ದರಿಂದ ಪಂದ್ಯಾವಳಿಯ ಈ ಆವೃತ್ತಿಯು 2023ರಲ್ಲಿ ನಡೆಯುವ ಸಾಧ್ಯತೆಯಿದೆ. ಏಕೆಂದರೆ ಈಗಾಗಲೇ 2022ರಲ್ಲಿ ಏಷ್ಯಾಕಪ್ ಫಿಕ್ಸ್ ಆಗಿದೆ. ಅದರ ದಿನಾಂಕಗಳನ್ನು ಸರಿಯಾದ ಸಮಯದಲ್ಲಿ ದೃಢೀಕರಿಸಲಾಗುವುದು ಎಂದು ಎಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಈ ವರ್ಷದ ಏಷ್ಯಾಕಪ್ ಟೂರ್ನಿ ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೂ ಮೊದಲು ನಡೆಯಬೇಕಿತ್ತು. 2018ರಿಂದ ಏಷ್ಯಾ ಕಪ್ ನಡೆದಿಲ್ಲ. 2020ಕ್ಕೆ ಯೋಜಿಸಲಾಗಿದ್ದ ಪಂದ್ಯಾವಳಿಯು ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲ್ಪಟ್ಟಿತ್ತು. ಪಂದ್ಯಾವಳಿಯ ಕೊನೆಯ ಎರಡು ಆವೃತ್ತಿಗಳನ್ನು ಭಾರತ ಗೆದ್ದಿತ್ತು.

ಎಸಿಸಿ ಕಾರ್ಯನಿರ್ವಾಹಕ ಮಂಡಳಿ, ಕೋವಿಡ್-19 ಮಹಾಮಾರಿಯಿಂದಾಗುವ ಅಪಾಯಗಳು ಮತ್ತು ನಿರ್ಬಂಧಗಳ ಹಿನ್ನೆಲೆಯಲ್ಲಿ, 2020ರ ಏಷ್ಯಾ ಕಪ್ ಅನ್ನು 2021ಕ್ಕೆ ಮುಂದೂಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT