ಕ್ರಿಕೆಟ್

ಬಾಂಗ್ಲಾ ಪ್ರವಾಸದಲ್ಲಿರುವ ಶ್ರೀಲಂಕಾ ತಂಡದ ಮೂವರಿಗೆ ಕೊರೋನಾ!

ಶ್ರೀಲಂಕಾ ಕ್ರಿಕೆಟ್ ತಂಡದ ಮೂವರು ಸದಸ್ಯರು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಕೆಲವೇ ಗಂಟೆಗಳ ಮೊದಲು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಢಾಕಾ: ಶ್ರೀಲಂಕಾ ಕ್ರಿಕೆಟ್ ತಂಡದ ಮೂವರು ಸದಸ್ಯರು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಕೆಲವೇ ಗಂಟೆಗಳ ಮೊದಲು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಶ್ರೀಲಂಕಾ ಆತಿಥೇಯ ಬಾಂಗ್ಲಾದೇಶ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡುತ್ತಿದ್ದು ಎರಡನೇ ಮತ್ತು ಮೂರನೇ ಪಂದ್ಯವನ್ನು ಮೇ 25 ಮತ್ತು 28 ಕ್ಕೆ ನಿಗದಿಪಡಿಸಲಾಗಿದೆ.

ಢಾಕಾದಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕಿಂತ ಮುಂಚಿತವಾಗಿ ಇಬ್ಬರು ಆಟಗಾರರು ಮತ್ತು ಶ್ರೀಲಂಕಾದ ತರಬೇತುದಾರ ಕೋವಿಡ್ -19 ಪಾಸಿಟಿವ್ ವರದಿ ಪಡೆದಿದ್ದಾರೆ ಎಂದು ESPNcricinfo ವರದಿ ಮಾಡಿದೆ.

ಆದರೆ ಈ ಕಾರಣದಿಂದಾಗಿ ಪಂದ್ಯವನ್ನು ರದ್ದುಗೊಳಿಸುವ ಸಾಧ್ಯತೆಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತಳ್ಳಿಹಾಕಿದೆ ಎಂದು ವೆಬ್‌ಸೈಟ್ ತಿಳಿಸಿದೆ.

ವರದಿಗಳ ಪ್ರಕಾರ ತಂಡದ ಬೌಲಿಂಗ್ ತರಬೇತುದಾರರಾಗಿರುವ ಚಮಿಂದ ವಾಸ್, ಆಟಗಾರರಾದ ಇಸುರು ಉದಾನ ಹಾಗೂ ಶಿರನ್ ಫರ್ನಾಂಡೊ ಅವರಿಗೆ ಸೋಂಕು ದೃಢವಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿಯು ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT