ಕೆ.ಎಲ್.ರಾಹುಲ್ 
ಕ್ರಿಕೆಟ್

ಟೀಂ ಇಂಡಿಯಾಗೆ ಶುಭ ಸುದ್ದಿ… ಇಂಗ್ಲೆಂಡ್‌ ವಿಮಾನ ಹತ್ತಲಿದ್ದಾರೆ ಕೆ.ಎಲ್.‌ ರಾಹುಲ್‌

ನ್ಯೂಜಿಲೆಂಡ್‌ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್​ ಹಾಗೂ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಸರಣಿಯಲ್ಲಿ ಆಡಲು ಇಂಗ್ಲೆಂಡ್‌ ವಿಮಾನ ಹತ್ತಲಿರುವ ಭಾರತ ತಂಡದೊಂದಿಗೆ ಸ್ಟಾರ್ ಆಟಗಾರ ಕೆ.ಎಲ್‌. ರಾಹುಲ್‌ ಕೂಡ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ನ್ಯೂಜಿಲೆಂಡ್‌ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್​ ಹಾಗೂ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಸರಣಿಯಲ್ಲಿ ಆಡಲು ಇಂಗ್ಲೆಂಡ್‌ ವಿಮಾನ ಹತ್ತಲಿರುವ ಭಾರತ ತಂಡದೊಂದಿಗೆ ಸ್ಟಾರ್ ಆಟಗಾರ ಕೆ.ಎಲ್‌. ರಾಹುಲ್‌ ಕೂಡ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಇಂಗ್ಲೆಂಡ್‌  ಪ್ರವಾಸಕ್ಕಾಗಿ ಆಯ್ಕೆಗೊಂಡ ಭಾರತ ತಂಡದಲ್ಲಿ ರಾಹುಲ್‌ ಸದಸ್ಯರಾಗಿದ್ದರೂ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾರಣ ಕೆ.ಎಲ್. ರಾಹುಲ್ ಫಿಟ್​ನೆಸ್ ಸಾಬೀತುಪಡಿಸಬೇಕಾಗಿತ್ತು. ಈ ಕ್ರಮದಲ್ಲಿ ಅವರು ಸಂಪೂರ್ಣ ಚೇತರಿಸಿಕೊಂಡಿರುವುದರಿಂದ ತಂಡದ ಜತೆಗೆ ಇಂಗ್ಲೆಂಡ್‌ ಗೆ ತೆರಳಲು ಬಿಸಿಸಿಐ ಹಸಿರು ನಿಶಾನಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪೂರ್ಣ ಫಿಟ್‌ನೆಸ್ ಸಾಧಿಸಿದರೆ ರಾಹುಲ್ ತಂಡಕ್ಕೆ ಮರಳಬಹುದು ಎಂದು ತಂಡದ ಆಯ್ಕೆ ಸಮಯದಲ್ಲಿ ಆಯ್ಕೆದಾರರು ಮೊದಲೇ ಹೇಳಿದ್ದರು. ಈ ವರ್ಷ ಐಪಿಎಲ್ ಮಧ್ಯದಲ್ಲಿಯೇ ರಾಹುಲ್ ಅಪೆಂಡಿಸೈಟಿಸ್ ನಿಂದ ಬಳಲುತ್ತಿದ್ದರು. ರಾಹುಲ್ ಕೊನೆಯ ಬಾರಿ 2019ರ ಸೆಪ್ಟೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯ ತಂಡದಲ್ಲಿದ್ದರೂ, ಫೈನಲ್‌ನಲ್ಲಿ ಆಡಲು ಅವರಿಗೆ ಅವಕಾಶ ಸಿಗಲಿಲ್ಲ. 29 ರ ಹರೆಯದ ರಾಹುಲ್ ಇದುವರೆಗೆ 36 ಟೆಸ್ಟ್ ಪಂದ್ಯಗಳಲ್ಲಿ 2006 ರನ್ ಗಳಿಸಿದ್ದಾರೆ. ಇದರಲ್ಲಿ 5 ಶತಕಗಳು ಹಾಗೂ 11 ಅರ್ಧಶತಕಗಳು ಒಳಗೊಂಡಿದೆ. 

ಭಾರತ ತಂಡ ಜೂನ್ 2ಕ್ಕೆ ಇಂಗ್ಲೆಂಡ್‌ಗೆ ಹೋಲಿದ್ದು, ಅಲ್ಲಿ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಮತ್ತು 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT