ಬಡಗಿ ಕೆಲಸ ಮಾಡುತ್ತಿರುವ ಕ್ಸೇವಿಯರ್ ಡೊಹೆರ್ಟಿ 
ಕ್ರಿಕೆಟ್

ಹೊಟ್ಟೆಪಾಡಿಗೆ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಕ್ಸೇವಿಯರ್ ಡೊಹೆರ್ಟಿ ಬಡಗಿ ಕೆಲಸ!

ಭಾರತದಲ್ಲಿ ಕ್ರಿಕೆಟ್ ಕ್ರೀಡೆಗಿರುವ ಆದರಣೆ, ಪ್ರತಿಷ್ಟೆ ಕುರಿತು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಐಪಿಎಲ್ ನಿಂದಾಗಿ ಅದೆಷ್ಟೋ ಮಂದಿ ದೇಶೀಯ ಹಾಗೂ ವಿದೇಶಿ ಕ್ರಿಕೆಟಿಗರು ಬೆಳಕಿಗೆ ಬರುತ್ತಿದ್ದಾರೆ. 

ಕ್ಯಾನ್‌ಬೆರಾ: ಭಾರತದಲ್ಲಿ ಕ್ರಿಕೆಟ್ ಕ್ರೀಡೆಗಿರುವ ಆದರಣೆ, ಪ್ರತಿಷ್ಟೆ ಕುರಿತು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಐಪಿಎಲ್ ನಿಂದಾಗಿ ಅದೆಷ್ಟೋ ಮಂದಿ ದೇಶೀಯ ಹಾಗೂ ವಿದೇಶಿ ಕ್ರಿಕೆಟಿಗರು ಬೆಳಕಿಗೆ ಬರುತ್ತಿದ್ದಾರೆ. ಹರಾಜಿನಲ್ಲಿ ಅವರಿಗೆ ಒಳ್ಳೆಯ ಬೇಡಿಕೆಯಿದೆ. ಪ್ರತಿಭೆ ಸಾಬೀತುಪಡಿಸಿದರೆ ಕೋಟಿ, ಕೋಟಿ ಗಳಿಸುವ ಅವಕಾಶವಿದೆ. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ 
ಹೇಳಿದ ಕೆಲವರು ಇನ್ನೂ ಲೀಗ್‌ನಲ್ಲಿ ಆಡುತ್ತಿದ್ದಾರೆ.

ಆದರೆ, ಕೆಲ ಮಂದಿ ಕ್ರಿಕೆಟ್ಟಿಗರ ಪರಿಸ್ಥಿತಿ ಇದಕ್ಕೆ ಭಿನ್ನವಾಗಿದೆ. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್‌ ತನ್ನ ಹೊಟ್ಟೆಪಾಡಿಗಾಗಿ ಬಡಗಿಯಾಗಿ ಬದಲಾಗಿದ್ದಾರೆ. ಕ್ಸೇವಿಯರ್ ಡೊಹೆರ್ಟಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿ ನಾಲ್ಕು ವರ್ಷಗಳು ಕಳೆದಿವೆ. 2015 ರ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದಲ್ಲಿ ಅವರು ಪಾಲುದಾರರಾಗಿದ್ದರು.ಎಡಗೈ ಸ್ಪಿನ್ನರ್ ಕ್ಸೇವಿಯರ್ ಡೊಹೆರ್ಟಿ 2001-02ರ ಹಂಗಾಮಿನಲ್ಲಿ ಮೊದಲ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅವರು ಸುಮಾರು 17 ವರ್ಷಗಳ ಕಾಲ ಕ್ರಿಕೆಟ್‌ ವೃತ್ತಿಯನ್ನು ಮುಂದುವರೆಸಿದ್ದರು.

 71 ಪ್ರಥಮ ದರ್ಜೆ, 176 ಲಿಸ್ಟ್ ಎ, 74 ಟಿ 20 ಪಂದ್ಯಗಳನ್ನು ಆಡಿದ್ದ ಅವರು ಒಟ್ಟು 415 ವಿಕೆಟ್ ಪಡೆದಿದ್ದರು. ಕೊನೆಯ ಬಾರಿಗೆ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದಲ್ಲಿ 2015 ರಲ್ಲಿ ಕಾಣಿಸಿಕೊಂಡಿದ್ದರು. ಆಸ್ಟ್ರೇಲಿಯಾದ ಮಾಜಿ ಎಡಗೈ ಸ್ಪಿನ್ನರ್ ಈವರೆಗೆ ಆಸ್ಟ್ರೇಲಿಯಾ ಪರ 4 ಟೆಸ್ಟ್ ಹಾಗೂ 60 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಮಾರ್ಚ್ 2020 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ  ಆಸ್ಟ್ರೇಲಿಯನ್ ಲೆಜೆಂಡ್ಸ್ ಪರ ಕೊನೆಯ ಬಾರಿ ಆಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT