ಭಾರತ ತಂಡ 
ಕ್ರಿಕೆಟ್

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಆಫ್ಘನ್, ನ್ಯೂಜಿಲೆಂಡ್ ಹಿಂದಿಕ್ಕಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಭಾರತ ತಂಡ ನೆಟ್ ರನ್ ರೇಟ್ ನಲ್ಲಿ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಹಿಂದಿಕ್ಕಿದೆ.

ದುಬೈ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಭಾರತ ತಂಡ ನೆಟ್ ರನ್ ರೇಟ್ ನಲ್ಲಿ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಹಿಂದಿಕ್ಕಿದೆ.

ಸ್ಕಾಟ್ಲೆಂಡ್ ನೀಡಿದ 86 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ಮುಂದೆ ಮತ್ತೊಂದು ಸವಾಲಿನ ಗುರಿ ಇತ್ತು. ಅದೇನೆಂದರೆ 7.1 ಓವರ್ ನಲ್ಲಿ ಭಾರತ ಈ ಪಂದ್ಯ ಗೆದ್ದರೆ ಆಗ ಭಾರತದ ನೆಟ್ ರನ್ ರೇಟ್ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನೆಟ್ ರನ್ ರೇಟ್ ಗಿಂತ ಹೆಚ್ಚಾಗುತ್ತಿತ್ತು. ಹೀಗಾಗಿ ಭಾರತಕ್ಕೆ ಸಿಡಿಲಬ್ಬರದ ಬ್ಯಾಟಿಂಗ್ ಅವಶ್ಯಕತೆ ಇತ್ತು.

ಇದೇ ಸವಾಲಿನೊಂದಿಗೆ ಕ್ರೀಸ್ ಗೆ ಇಳಿದ ಭಾರತದ ಆರಂಭಿಕ ಜೋಡಿಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಅಕ್ಷರಶಃ ಸಿಡಿಲಿಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 5 ಓವರ್ ನಲ್ಲಿಯೇ ಈ ಜೋಡಿ 70ರನ್ ಗಳ ಭರ್ಜರಿ ಜೊತೆಯಾಟವಾಡಿತು.

16 ಎಸೆತ ಎದುರಿಸಿದ ರೋಹಿತ್ ಶರ್ಮಾ ಒಂದು ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 30 ರನ್ ಗಳಿಸಿ ಔಟಾದರು. ಅಷ್ಟು ಹೊತ್ತಿಗೆ ಭಾರತ ಈ ಸವಾಲು ಮುಟ್ಟುವುದು ಖಚಿತವಾಗಿತ್ತು. ಮತ್ತೊಂದು ತುದಿಯಲ್ಲಿ ಭರ್ಜರಿಯಾಗಿ ಆಡುತ್ತಿದ್ದ ಕೆಎಲ್ ರಾಹುಲ್ ಕೇವಲ 19 ಎಸೆತದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದರು. ಆದರೆ ನಂತರದ ಓವರ್ ನಲ್ಲಿ ರಾಹುಲ್ ಔಟ್ ಆದರು.

ಬಳಿಕ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಗೆಲುವಿನ ಔಪಚಾರಿಕತೆಯನ್ನು ಮುಕ್ತಾಯಗೊಳಿಸಿದರು. ಆ ಮೂಲಕ ಭಾರತ ಸ್ಕಾಟ್ಲೆಂಡ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT