ಶೋಯೆಬ್ ಅಖ್ತರ್ 
ಕ್ರಿಕೆಟ್

ಟಿ-20 ವಿಶ್ವಕಪ್: ನ್ಯೂಜಿಲೆಂಡ್ ಗೆ ಎಚ್ಚರಿಕೆ ಕೊಟ್ಟ ಶೋಯೆಬ್ ಅಖ್ತರ್!

ಟೀಮ್ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದ ಮೇಲೆ ಪಾಕಿಸ್ತಾನಕ್ಕೆ ಜ್ವರ ಬಂದಂತಾಗಿದೆ. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದ ಬಳಿಕ ಟೂರ್ನಿಯಲ್ಲಿ ಭಾರತ ವಾಪಸ್ ಆಗುವ ಲಕ್ಷಣ ಗೋಚರವಾಗುತ್ತಿವೆ.

ಬೆಂಗಳೂರು: ಟೀಮ್ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದ ಮೇಲೆ ಪಾಕಿಸ್ತಾನಕ್ಕೆ ಜ್ವರ ಬಂದಂತಾಗಿದೆ. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದ ಬಳಿಕ ಟೂರ್ನಿಯಲ್ಲಿ ಭಾರತ ವಾಪಸ್ ಆಗುವ ಲಕ್ಷಣ ಗೋಚರವಾಗುತ್ತಿವೆ. ಶುಕ್ರವಾರ ಭಾರತದ ಅದ್ಭುತ ಗೆಲುವು ಪಾಕಿಸ್ತಾನ ಕ್ರಿಕೆಟಿಗರ ನಿದ್ದೆಗೆಡಿಸಿದೆ.

ಈ ಹಿನ್ನೆಲೆಯಲ್ಲಿ ನಾಳಿನ ಅಫ್ಘಾನಿಸ್ತಾನ ವಿರುದ್ಧ ಆಡಲಿರುವ ನ್ಯೂಜಿಲೆಂಡ್ ತಂಡದ ಆಟಗಾರರನ್ನು ಎಚ್ಚರಿಸುವ ಕಾರ್ಯಕ್ಕೆ ಪಾಕಿಸ್ತಾನಿಯರು ಕೈ ಹಾಕಿದ್ದಾರೆ.

ಪಾಕಿಸ್ತಾನ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ತನ್ನ ಯುಟ್ಯೂಬ್ ಚಾನೆಲ್ ನಲ್ಲಿ ನ್ಯೂಜಿಲೆಂಡ್ ಗೆ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ. " ನಾಳೆ ಅಫ್ಘಾನಿಸ್ತಾನ ವಿರುದ್ಧ ನಡೆಯುವ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತರೆ, ನಂತರ ಬಹಳಷ್ಟು ಪ್ರಶ್ನೆಗಳು ಉದ್ಭವವಾಗಲಿವೆ. ನಾನು ನಿಮಗೆ ಈಗಲೇ ಇದನ್ನು ಎಚ್ಚರಿಸುತ್ತಿದ್ದೇನೆ. ನನಗೆ ಭಯ ಏನೆಂದ್ರೆ ಸೋಷಿಯಲ್ ಮೀಡಿಯಾದ ಟಾಪ್ ಟ್ರೆಂಡಿಂಗ್ ನಲ್ಲಿ ಹೊಸ ವಿಚಾರವವೊಂದು ಹುಟ್ಟಿಕೊಳ್ಳಲಿದೆ. ಅಲ್ಲದೆ ನಾನು ಯಾವುದೇ ವಿವಾದ ಸೃಷ್ಟಿಸಲು ಬಯಸುವುದಿಲ್ಲ" ಅನ್ನೋ ಎಚ್ಚರಿಕೆ ಸಂಗತಿಗಳನ್ನು ನ್ಯೂಜಿಲೆಂಡ್ ಮುಂದೆ ಶೋಯೆಬ್ ಅಖ್ತರ್ ಇಟ್ಟಿದ್ದಾರೆ.

"ನ್ಯೂಜಿಲೆಂಡ್ ಬಗ್ಗೆ ಪಾಕಿಸ್ತಾನಿಯರಿಗೆ ಒಳ್ಳೆಯ ಭಾವನೆಗಳಿವೆ. ಅಫ್ಘಾನಿಸ್ತಾನವನ್ನು ಸೋಲಿಸಲು ನ್ಯೂಜಿಲೆಂಡ್ ಉತ್ತಮ ತಂಡ ಅನ್ನೋದು ನನ್ನ ಭಾವನೆ. ಒಂದು ವೇಳೆ ಚೆನ್ನಾಗಿ ಆಡದಿದ್ದರೆ ಸಮಸ್ಯೆಯಾಗಲಿದೆ. ನಂತರ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಚರ್ಚೆ, ನಿಂದನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಭಾರತದ ಆಗಮನ ಈ ಟೂರ್ನಿಗೆ ಜೀವ ತಂದಿದೆ. ಮತ್ತೊಮ್ಮೆ ಭಾರತ-ಪಾಕ್ ಪಂದ್ಯ ನಡೆಯುವ ಸಾಧ್ಯತೆ ಇದೆ. ಇದನ್ನು ಇಡೀ ಜಗತ್ತು ನೋಡಲು ಕಾತುರವಾಗಿದೆ" ಅಂತಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT