ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡ 
ಕ್ರಿಕೆಟ್

ಟಿ20 ವಿಶ್ವಕಪ್: ನ್ಯೂಜಿಲ್ಯಾಂಡ್ ವಿರುದ್ಧ ಮುಗ್ಗರಿಸಿದ ಅಫ್ಘಾನ್; ಸೆಮಿಫೈನಲ್ ಪ್ರವೇಶಿಸುವ ಭಾರತದ ಆಸೆಗೆ ಕೊಳ್ಳಿ!

ಅಬುಧಾಬಿಯಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ನ್ಯೂಜಿಲ್ಯಾಂಡ್ 8 ವಿಕೆಟ್ ಗಳ ಜಯ ಗಳಿಸಿದೆ.

ಅಬುಧಾಬಿ: ಅಬುಧಾಬಿಯಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ನ್ಯೂಜಿಲ್ಯಾಂಡ್ 8 ವಿಕೆಟ್ ಗಳ ಜಯ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನ್ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಪೇರಿಸಿತು. 125 ರನ್ ಗಳ ಗುರಿಯನ್ನು ನ್ಯೂಜಿಲ್ಯಾಂಡ್ ತಂಡ ಕೇವಲ 18.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ ತಲುಪಿ ತ್ವರಿತಗತಿಯಲ್ಲಿ ಅಫ್ಘನ್ ತಂಡದ ವಿರುದ್ಧ ಗೆಲುವನ್ನು ತನ್ನದಾಗಿಸಿಕೊಂಡಿತ್ತು.

ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶದ ದೃಷ್ಟಿಯಿಂದ ಈ ಪಂದ್ಯ ಭಾರತೀಯ ಕ್ರೀಡಾಭಿಮಾನಿಗಳಿಗೆ ಮಹತ್ವ ಪಡೆದುಕೊಂಡಿತ್ತು. ಈ ಪಂದ್ಯದಲ್ಲಿ ಅಫ್ಘಾನ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದರೆ ಭಾರತದ ಸೆಮಿಫೈನಲ್ ಪ್ರವೇಶದ ಕನಸು ಜೀವಂತವಾಗಿರುತ್ತಿತ್ತು. ಆದರೆ ಅಫ್ಘಾನ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಸೋಲು ಕಂಡಿರುವ ಪರಿಣಾಮ ಭಾರತದ ಆಸೆ ಭಗ್ನಗೊಂಡಿದೆ.  ಇದೇ ವೇಳೆ ನ್ಯೂಜಿಲ್ಯಾಂಡ್ ಸೆಮಿಫೈನಲ್ಸ್ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದೆ. 

ಅಫ್ಘಾನ್ ಪರ ಗುಲ್ಬದೀನ್ ನೈಬ್ 15, ನಿಜಿಬುಲ್ 73 ಮತ್ತು ನಾಯಕ ಮೊಹಮ್ಮದ್ ನಬಿ 14 ರನ್ ಗಳಿಸಿದ್ದರು. 

ನ್ಯೂಜಿಲ್ಯಾಂಡ್ ಪರ ಮಾರ್ಟಿನ್ ಗಪ್ಟಿಲ್ 23 ಎಸೆತಗಳಲ್ಲಿ 28 ರನ್ ಗಳಿಸಿದರು, ಡೇರಿಲ್ ಮಿಚೆಲ್ 12 ಎಸೆತಗಳಲ್ಲಿ 17 ರನ್ ಗಳಿಸಿ ಪೆವಿಲಿಯನ್ ನತ್ತ ನಡೆದರು. ಕೇನ್ ವಿಲಿಯಮ್ಸನ್ ( 42 ಎಸೆತಗಳಲ್ಲಿ 40 ರನ್)  ಡೆವೊನ್ ಕಾನ್ವೆ 32 ಎಸೆತಗಳಲ್ಲಿ 36 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT