ಕ್ರಿಕೆಟ್

ಈ ಬಾರಿಯ ಟಿ20 ವಿಶ್ವಕಪ್ ನಮಗೆ ಒಳ್ಳೆಯ ಪಾಠ ಕಲಿಸಿತು: ಕೆ.ಎಲ್ ರಾಹುಲ್

ಈ ಟೂರ್ನಿಯ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಅರುಣ್ ಭರತ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಪಾಲಿಗೂ ಸೋಮವಾರದ ಪಂದ್ಯ ವಿದಾಯದ ಪಂದ್ಯವಾಗಿತ್ತು. 

ನಮೀಬಿಯಾ ವಿರುದ್ಧ ಗೆಲ್ಲುವ ಮೂಲಕ ತನ್ನ ಅಂತಿಮ ಪಂದ್ಯವನ್ನು ಮುಗಿಸಿ ಭಾರತ ತಂಡವು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ. ಈ ಬಾರಿಯ ವಿಶ್ವಕಪ್ ಪಂದ್ಯದ ಬಗ್ಗೆ ಮಾತನಾಡಿರುವ ಕ್ರಿಕೆಟಿಗ ಕೆ.ಎಲ್ ರಾಹುಲ್ ಇಲ್ಲಿ ನಾವು ಸಾಕಷ್ಟು ಕಲಿತಿದ್ದೇವೆ ಎಂದು ಹೇಳಿದ್ದಾರೆ. 

ಈ ಬಗ್ಗೆ  ಕೂ ಮಾಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ 'ನಮಗೆ ಇದೊಂದು ಆದರ್ಶವಾದ ವಿಶ್ವಕಪ್‌ ಆಗಿರಲಿಲ್ಲ, ಆದರೆ ನಾವು ಕಲಿತೆವು ಮತ್ತು ಬೆಳೆದೆವು. ಪ್ರೀತಿ ಮತ್ತು ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ನಾವು ಕ್ರಿಕೆಟ್ ಪಟುಗಳಾಗಿ ಬೆಳೆಯಲು ಸಹಾಯ ಮಾಡಿದ ನಮ್ಮ ಕೋಚ್‌ಗಳಿಗೆ ಕೃತಜ್ಞತೆಗಳು. ತಂಡವನ್ನು ಮುನ್ನಡೆಸಿದ ಮತ್ತು ನಮಗೆ ಎಲ್ಲ ರೀತಿಯ ಬೆಂಬಲ ನೀಡಿದ ವಿರಾಟ್ ಕೊಹ್ಲಿ ಅವರಿಗೆ ನಮ್ಮ ಅನಂತ ಕೃತಜ್ಞತೆಗಳು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. 

ಸೆಮಿಫೈನಲ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲವಾದ ಭಾರತ ತಂಡವು ಸತತ ಮೂರನೇ ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿತ್ತು. ಐದು ಪಂದ್ಯಗಳಲ್ಲಿ ಒಟ್ಟು ಆರು ಅಂಕಗಳನ್ನು ಕಲೆ ಹಾಕಿತ್ತು. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದು ಭಾರತದ ವಿಶ್ವಕಪ್ ಕನಸು ಭಗ್ನಗೊಳ್ಳಲು ಕಾರಣವಾಗಿದೆ.

 ಈ ಟೂರ್ನಿಯ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಅರುಣ್ ಭರತ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಪಾಲಿಗೂ ಸೋಮವಾರದ ಪಂದ್ಯ ವಿದಾಯದ ಪಂದ್ಯವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT