ಕ್ರಿಕೆಟ್

ಈ ಬಾರಿಯ ಟಿ20 ವಿಶ್ವಕಪ್ ನಮಗೆ ಒಳ್ಳೆಯ ಪಾಠ ಕಲಿಸಿತು: ಕೆ.ಎಲ್ ರಾಹುಲ್

ಈ ಟೂರ್ನಿಯ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಅರುಣ್ ಭರತ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಪಾಲಿಗೂ ಸೋಮವಾರದ ಪಂದ್ಯ ವಿದಾಯದ ಪಂದ್ಯವಾಗಿತ್ತು. 

ನಮೀಬಿಯಾ ವಿರುದ್ಧ ಗೆಲ್ಲುವ ಮೂಲಕ ತನ್ನ ಅಂತಿಮ ಪಂದ್ಯವನ್ನು ಮುಗಿಸಿ ಭಾರತ ತಂಡವು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ. ಈ ಬಾರಿಯ ವಿಶ್ವಕಪ್ ಪಂದ್ಯದ ಬಗ್ಗೆ ಮಾತನಾಡಿರುವ ಕ್ರಿಕೆಟಿಗ ಕೆ.ಎಲ್ ರಾಹುಲ್ ಇಲ್ಲಿ ನಾವು ಸಾಕಷ್ಟು ಕಲಿತಿದ್ದೇವೆ ಎಂದು ಹೇಳಿದ್ದಾರೆ. 

ಈ ಬಗ್ಗೆ  ಕೂ ಮಾಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ 'ನಮಗೆ ಇದೊಂದು ಆದರ್ಶವಾದ ವಿಶ್ವಕಪ್‌ ಆಗಿರಲಿಲ್ಲ, ಆದರೆ ನಾವು ಕಲಿತೆವು ಮತ್ತು ಬೆಳೆದೆವು. ಪ್ರೀತಿ ಮತ್ತು ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ನಾವು ಕ್ರಿಕೆಟ್ ಪಟುಗಳಾಗಿ ಬೆಳೆಯಲು ಸಹಾಯ ಮಾಡಿದ ನಮ್ಮ ಕೋಚ್‌ಗಳಿಗೆ ಕೃತಜ್ಞತೆಗಳು. ತಂಡವನ್ನು ಮುನ್ನಡೆಸಿದ ಮತ್ತು ನಮಗೆ ಎಲ್ಲ ರೀತಿಯ ಬೆಂಬಲ ನೀಡಿದ ವಿರಾಟ್ ಕೊಹ್ಲಿ ಅವರಿಗೆ ನಮ್ಮ ಅನಂತ ಕೃತಜ್ಞತೆಗಳು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. 

ಸೆಮಿಫೈನಲ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲವಾದ ಭಾರತ ತಂಡವು ಸತತ ಮೂರನೇ ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿತ್ತು. ಐದು ಪಂದ್ಯಗಳಲ್ಲಿ ಒಟ್ಟು ಆರು ಅಂಕಗಳನ್ನು ಕಲೆ ಹಾಕಿತ್ತು. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದು ಭಾರತದ ವಿಶ್ವಕಪ್ ಕನಸು ಭಗ್ನಗೊಳ್ಳಲು ಕಾರಣವಾಗಿದೆ.

 ಈ ಟೂರ್ನಿಯ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಅರುಣ್ ಭರತ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಪಾಲಿಗೂ ಸೋಮವಾರದ ಪಂದ್ಯ ವಿದಾಯದ ಪಂದ್ಯವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್