ಸಂಗ್ರಹ ಚಿತ್ರ 
ಕ್ರಿಕೆಟ್

T20 World Cup: ವೀಕ್ಷಣೆಯಲ್ಲಿ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆ ಬರೆದ ಭಾರತ-ಪಾಕ್ ನಡುವಿನ ಪಂದ್ಯ

ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್ (T20 World Cup) ಟೂರ್ನಿಯಲ್ಲಿ ಅತೀ ಹೆಚ್ಚು ವೀಕ್ಷಣೆ (Record viewership) ಪಡೆದ ಪಂದ್ಯಗಳಲ್ಲಿ ಭಾರತ-ಪಾಕಿಸ್ತಾನ (India vs Pakistan) ನಡುವಿನ ಪಂದ್ಯ ದಾಖಲೆ ಬರೆದಿದ್ದು, ವೀಕ್ಷಣೆಯಲ್ಲಿ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಐಸಿಸಿ (ICC)ಮಾಹಿತಿ ನೀಡಿದೆ.

ದುಬೈ: ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್ (T20 World Cup) ಟೂರ್ನಿಯಲ್ಲಿ ಅತೀ ಹೆಚ್ಚು ವೀಕ್ಷಣೆ (Record viewership) ಪಡೆದ ಪಂದ್ಯಗಳಲ್ಲಿ ಭಾರತ-ಪಾಕಿಸ್ತಾನ (India vs Pakistan) ನಡುವಿನ ಪಂದ್ಯ ದಾಖಲೆ ಬರೆದಿದ್ದು, ವೀಕ್ಷಣೆಯಲ್ಲಿ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಐಸಿಸಿ (ICC)ಮಾಹಿತಿ ನೀಡಿದೆ.

ಈ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಕಟಣೆಯಲ್ಲಿ ತಿಳಿಸಿದ್ದು, ಟಿ- 20 ವಿಶ್ವಕಪ್ ಭಾಗವಾಗಿ ಭಾರತ, ಪಾಕಿಸ್ತಾನ ತಂಡಗಳ ನಡುವೆ ನಡೆದ ಲೀಗ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸಿದ ಪ್ರೇಕ್ಷಕರ ಸಂಖ್ಯೆ ಎಲ್ಲ ದಾಖಲೆಗಳನ್ನು ಮುರಿದಿದೆ. ಟಿ ವಿ ಮೂಲಕ ವಿಶ್ವದಾದ್ಯಂತ 16 ಕೋಟಿ 70 ಲಕ್ಷ ಮಂದಿ ಪಂದ್ಯ ವೀಕ್ಷಿಸಿದ್ದಾರೆ. ಅಲ್ಲದೇ 15.9 ಬಿಲಿಯನ್ ನಿಮಿಷಗಳಷ್ಟು ಕಾಲ ವೀಕ್ಷಣೆಯಾಗಿದೆ ಎಂದು ಸ್ಟಾರ್ ಇಂಡಿಯಾ ನೆಟ್‌ವರ್ಕ್ ತಿಳಿಸಿದೆ.

ಟಿ- 20 ವಿಶ್ವಕಪ್‌ ಇತಿಹಾಸದಲ್ಲಿ ಇದು ಹೆಚ್ಚು ಮಂದಿ ವೀಕ್ಷಸಿದ ಪಂದ್ಯವಾಗಿ ಚರಿತ್ರೆ ನಿರ್ಮಿಸಿದೆ. 2016ರಲ್ಲಿ ಟಿ20 ವಿಶ್ವಕಪ್‌ ನಲ್ಲಿ ಭಾರತ, ವೆಸ್ಟ್‌ ಇಂಡೀಸ್‌ ತಂಡಗಳ ನಡುವೆ ಮುಂಬೈನಲ್ಲಿ ನಡೆದ ಸೆಮಿಫೈನಲ್ ಪಂದ್ಯ ವೀಕ್ಷಕರ ಸಂಖ್ಯೆಯನ್ನು ಇದು ಮೀರಿಸಿದೆ ಎಂದು ಐಸಿಸಿ ಹೇಳಿದೆ.  ‘ವೀಕ್ಷಕರ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ನೋಡಿದರೆ ಟಿ20 ಕ್ರಿಕೆಟ್‌ನ ಶಕ್ತಿ ಮತ್ತು ಜನಪ್ರಿಯತೆಯು ಅರ್ಥವಾಗುತ್ತದೆ‘ ಎಂದು ಐಸಿಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆಫ್ ಅಲಾರ್ಡಿಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ