ವೃದ್ದಿಮಾನ್ ಸಾಹಾ ಬದಲಿಗೆ ಭರತ್ ವಿಕೆಟ್ ಕೀಪಿಂಗ್ 
ಕ್ರಿಕೆಟ್

ಮೊದಲ ಟೆಸ್ಟ್: ಭಾರತಕ್ಕೆ ಆಘಾತ, ಕುತ್ತಿಗೆ ನೋವಿನಿಂದ ಕಣಕ್ಕಿಳಿಯದ ವೃದ್ದಿಮಾನ್ ಸಾಹಾ, ಕೆಎಸ್ ಭರತ್ ವಿಕೆಟ್ ಕೀಪಿಂಗ್

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೂರನೇ ದಿನ ಭಾರತಕ್ಕೆ ಆಘಾತ ಎದುರಾಗಿದ್ದು, ಕುತ್ತಿಗೆ ನೋವಿನಿಂದಾಗಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾ  ಕಣಕ್ಕಿಳಿದಿಲ್ಲ. ಅವರ ಬದಲಿಗೆ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೂರನೇ ದಿನ ಭಾರತಕ್ಕೆ ಆಘಾತ ಎದುರಾಗಿದ್ದು, ಕುತ್ತಿಗೆ ನೋವಿನಿಂದಾಗಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾ  ಕಣಕ್ಕಿಳಿದಿಲ್ಲ. ಅವರ ಬದಲಿಗೆ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.

ಇಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ವಿಕೆಟ್ ಕೀಪರ್ ಆಗಿ ವೃದ್ದಿಮಾನ್ ಸಾಹಾ ಬದಲು ಕೆ.ಎಸ್.ಭರತ್ ಕಣಕ್ಕಿಳಿದರು. ಹೌದು ವೃದ್ದಿಮಾನ್ ಸಾಹಾ ಅವರಿಗೆ ಕುತ್ತಿಗೆಯಲ್ಲಿ ನೋವು ಕಂಡುಬಂದ ಕಾರಣ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಕೆ.ಎಸ್.ಭರತ್ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತಿದ್ದಾರೆ.

“ವೃದ್ಧಿಮಾನ್ ಸಹಾ ಅವರ ಕುತ್ತಿಗೆಯಲ್ಲಿ ಬಿಗಿತವಿದೆ. ಬಿಸಿಸಿಐ ವೈದ್ಯಕೀಯ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ ಮತ್ತು ಅವರ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅವರ ಅನುಪಸ್ಥಿತಿಯಲ್ಲಿ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುತ್ತಾರೆ” ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

2010 ರಲ್ಲಿ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ವೃದ್ದಿಮಾನ್ ಸಾಹ ಈವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಹೀಗಾಗಿ ಇವರ ಜಾಗಕ್ಕೆ ರಿಷಭ್ ಪಂತ್ ಆಯ್ಕೆಯಾದರು. ಪಂತ್ ಅನೇಕ ಬಾರಿ ಭಾರತಕ್ಕೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದಾರೆ. ಆದರೆ, ಸದ್ಯ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಪಂತ್ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ ಸಾಹ ಸ್ಥಾನ ಪಡೆದುಕೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video