ಕ್ರಿಸ್ ಗೇಯ್ಲ್ 
ಕ್ರಿಕೆಟ್

ಟಿ20 ವಿಶ್ವಕಪ್ ತಯಾರಿಗಾಗಿ ಐಪಿಎಲ್-2021 ಟೂರ್ನಿ ತೊರೆದ ಕ್ರಿಸ್ ಗೇಯ್ಲ್

ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ತಯಾರಿಗಾಗಿ ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಐಪಿಎಲ್ 2021 ಟೂರ್ನಿಯಿಂದ ಹೊರಬಿದ್ದಿದ್ದಾರೆ.

ದುಬೈ: ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ತಯಾರಿಗಾಗಿ ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಐಪಿಎಲ್ 2021 ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಹಾಲಿ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕ್ರಿಸ್ ಗೇಯ್ಲ್ ಐಪಿಎಲ್ ಟೂರ್ನಿಯ ಬಯೋಬಬಲ್ ನಿಂದ  ಹೊರಬಿದ್ದು ಟಿ20 ಟೂರ್ನಿ ಬಯೋಬಬಲ್ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ. 

ಈ ಬಗ್ಗೆ ಮಾತನಾಡಿರುವ ಕ್ರಿಸ್ ಗೇಯ್ಲ್ 'ಕಳೆದ ಕೆಲ ತಿಂಗಳಿನಿಂದ ನಾನು ಸಿಡಬ್ಲ್ಯುಐ ಬಬಲ್, ಸಿಪಿಎಲ್ ಬಬಲ್ ನಂತರ ಐಪಿಎಲ್ ಬಬಲ್‍ನ ಭಾಗವಾಗಿದ್ದೇನೆ. ಈಗ ನಾನು ಮಾನಸಿಕವಾಗಿ ಸಿದ್ಧವಾಗಲು ಮತ್ತು ರಿಫ್ರೆಶ್ ಆಗಲು ಬಯಸುತ್ತೇನೆ. ಹೀಗಾಗಿ ಬಯೋಬಬಲ್ ನಿಂದ ಹೊರಬಂದಿದ್ದೇನೆ ಎಂದು ಗೇಲ್ ಹೇಳಿದ್ದಾರೆ.

ಅಂತೆಯೇ ವಿಶ್ವಕಪ್‍ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ನೆರವಾಗಲು ದುಬೈನಲ್ಲಿ ವಿರಾಮ ಪಡೆಯುತ್ತಿದ್ದೇನೆ. ನನಗೆ ಅನುಮತಿ ನೀಡಿದ ಪಂಜಾಬ್ ತಂಡಕ್ಕೆ ಧನ್ಯವಾದಗಳು. ಮುಂಬರುವ ಪಂದ್ಯಗಳಿಗೆ ಶುಭ ಹಾರೈಕೆಗಳು. ಈ ಆವೃತ್ತಿಯ ಮುಂದಿನ ಪಂದ್ಯಗಳಿಗೆ ಗೇಲ್ ಲಭ್ಯ ಇರುವುದಿಲ್ಲ ಎಂದು ಪಂಜಾಬ್ ತಂಡ ಟ್ವೀಟ್ ಮಾಡಿದೆ.

42 ವರ್ಷದ ಗೇಲ್ ಈ ವರ್ಷ ವೆಸ್ಟ್ ಇಂಡೀಸ್, ಸೈಂಟ್ ಕೀಟ್ಸ್, ನೆವಿಸ್ ಪ್ಯಾಟ್ರಿಯಾಟ್ಸ್, ಕ್ವೆಟ್ಟಾ ಗ್ಲಾಡಿಯೇಟರ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಆಡಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲ ಟೂರ್ನಿಗಳು ಬಯೋಬಬಲ್ ನಿಯಮಗಳ ಆಡಿಯಲ್ಲಿ ನಡೆದಿತ್ತು. ಹೀಗಾಗಿ ಆಟಗಾರರು ಕೋವಿಡ್ 19 ನಿಯಮವನ್ನು ಉಲ್ಲಂಘಿಸುವಂತಿಲ್ಲ.

ಟಿ–20 ಕ್ರಿಕೆಟ್‌ನಲ್ಲಿ ಸುಮಾರು 14,000 ರನ್ ಗಳಿಸಿರುವ ಗೇಲ್, ವೆಸ್ಟ್ ಇಂಡೀಸ್ ತಂಡವು 2012 ಮತ್ತು 2016ರ ಟಿ–20 ವಿಶ್ವಕಪ್ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT