ಕ್ರಿಸ್ ಗೇಯ್ಲ್ 
ಕ್ರಿಕೆಟ್

ಟಿ20 ವಿಶ್ವಕಪ್ ತಯಾರಿಗಾಗಿ ಐಪಿಎಲ್-2021 ಟೂರ್ನಿ ತೊರೆದ ಕ್ರಿಸ್ ಗೇಯ್ಲ್

ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ತಯಾರಿಗಾಗಿ ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಐಪಿಎಲ್ 2021 ಟೂರ್ನಿಯಿಂದ ಹೊರಬಿದ್ದಿದ್ದಾರೆ.

ದುಬೈ: ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ತಯಾರಿಗಾಗಿ ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಐಪಿಎಲ್ 2021 ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಹಾಲಿ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕ್ರಿಸ್ ಗೇಯ್ಲ್ ಐಪಿಎಲ್ ಟೂರ್ನಿಯ ಬಯೋಬಬಲ್ ನಿಂದ  ಹೊರಬಿದ್ದು ಟಿ20 ಟೂರ್ನಿ ಬಯೋಬಬಲ್ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ. 

ಈ ಬಗ್ಗೆ ಮಾತನಾಡಿರುವ ಕ್ರಿಸ್ ಗೇಯ್ಲ್ 'ಕಳೆದ ಕೆಲ ತಿಂಗಳಿನಿಂದ ನಾನು ಸಿಡಬ್ಲ್ಯುಐ ಬಬಲ್, ಸಿಪಿಎಲ್ ಬಬಲ್ ನಂತರ ಐಪಿಎಲ್ ಬಬಲ್‍ನ ಭಾಗವಾಗಿದ್ದೇನೆ. ಈಗ ನಾನು ಮಾನಸಿಕವಾಗಿ ಸಿದ್ಧವಾಗಲು ಮತ್ತು ರಿಫ್ರೆಶ್ ಆಗಲು ಬಯಸುತ್ತೇನೆ. ಹೀಗಾಗಿ ಬಯೋಬಬಲ್ ನಿಂದ ಹೊರಬಂದಿದ್ದೇನೆ ಎಂದು ಗೇಲ್ ಹೇಳಿದ್ದಾರೆ.

ಅಂತೆಯೇ ವಿಶ್ವಕಪ್‍ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ನೆರವಾಗಲು ದುಬೈನಲ್ಲಿ ವಿರಾಮ ಪಡೆಯುತ್ತಿದ್ದೇನೆ. ನನಗೆ ಅನುಮತಿ ನೀಡಿದ ಪಂಜಾಬ್ ತಂಡಕ್ಕೆ ಧನ್ಯವಾದಗಳು. ಮುಂಬರುವ ಪಂದ್ಯಗಳಿಗೆ ಶುಭ ಹಾರೈಕೆಗಳು. ಈ ಆವೃತ್ತಿಯ ಮುಂದಿನ ಪಂದ್ಯಗಳಿಗೆ ಗೇಲ್ ಲಭ್ಯ ಇರುವುದಿಲ್ಲ ಎಂದು ಪಂಜಾಬ್ ತಂಡ ಟ್ವೀಟ್ ಮಾಡಿದೆ.

42 ವರ್ಷದ ಗೇಲ್ ಈ ವರ್ಷ ವೆಸ್ಟ್ ಇಂಡೀಸ್, ಸೈಂಟ್ ಕೀಟ್ಸ್, ನೆವಿಸ್ ಪ್ಯಾಟ್ರಿಯಾಟ್ಸ್, ಕ್ವೆಟ್ಟಾ ಗ್ಲಾಡಿಯೇಟರ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಆಡಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲ ಟೂರ್ನಿಗಳು ಬಯೋಬಬಲ್ ನಿಯಮಗಳ ಆಡಿಯಲ್ಲಿ ನಡೆದಿತ್ತು. ಹೀಗಾಗಿ ಆಟಗಾರರು ಕೋವಿಡ್ 19 ನಿಯಮವನ್ನು ಉಲ್ಲಂಘಿಸುವಂತಿಲ್ಲ.

ಟಿ–20 ಕ್ರಿಕೆಟ್‌ನಲ್ಲಿ ಸುಮಾರು 14,000 ರನ್ ಗಳಿಸಿರುವ ಗೇಲ್, ವೆಸ್ಟ್ ಇಂಡೀಸ್ ತಂಡವು 2012 ಮತ್ತು 2016ರ ಟಿ–20 ವಿಶ್ವಕಪ್ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT