(ಬಡದಿಂದ) ಶ್ರೀನಾಥ್ ಮತ್ತಿತರ ಚಿತ್ರ 
ಕ್ರಿಕೆಟ್

ಟಿ-20 ವಿಶ್ವಕಪ್: ಅಂಪೈರ್ ಪಟ್ಟಿಯಲ್ಲಿ ಮೆನನ್, ರೆಫ್ರಿಯಾಗಿ ಜಾವಗಲ್ ಶ್ರೀನಾಥ್ ನೇಮಕ

ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ 20 ಅಂಪೈರ್ಸ್ ಮತ್ತು ರೆಫ್ರಿಗಳ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.

ನವದೆಹಲಿ: ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ 20 ಅಂಪೈರ್ಸ್ ಮತ್ತು ರೆಫ್ರಿಗಳ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಇದರಲ್ಲಿ 16 ಅಂಪೈರ್ ಗಳು ಹಾಗೂ ನಾಲ್ವರು ರೆಫ್ರಿಗಳ ಹೆಸರು ಇವೆ. ನಾಲ್ವರು ರೆಫರಿಗಳ ಪೈಕಿ ಕನ್ನಡಿಗ ಜಾವಗಲ್ ಶ್ರೀನಾಥ್ ಕೂಡಾ ಸ್ಥಾನ ಪಡೆದಿದ್ದಾರೆ.

16 ಅಂಪೈರ್ ಗಳಲ್ಲಿ ಭಾರತೀಯ ಅಂಪೈರ್ ನಿತಿನ್ ಮೆನನ್ ಅವರು ಸ್ಥಾನ ಪಡೆದಿದ್ದಾರೆ. ಈ ಮೂಲಕ 20 ಮಂದಿಯ ಪಟ್ಟಿಯಲ್ಲಿ ಇಬ್ಬರು ಭಾರತೀಯರಿಗೂ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಕಾರ್ಯನಿರ್ವಹಿಸುವ ಅವಕಾಶ ಲಭಿಸಿದೆ.  

ಭಾರತದ ಅತ್ಯಂತ ಶ್ರೇಷ್ಠ ಬೌಲರ್ ಗಳಲ್ಲಿ ಒಬ್ಬರೆನಿಸಿರುವ ಶ್ರೀನಾಥ್ ಆಟಗಾರನಾಗಿ ನಿವೃತ್ತಿಯಾದ ನಂತರ ಮ್ಯಾಚ್ ರೆಫ್ರಿಯಾಗಿ ಸೆಕೆಂಡ್ ಇನ್ನಿಂಗ್ಸ್ ಆಡುತ್ತಿದ್ದಾರೆ. 2006ರಿಂದ ಅವರು ಐಸಿಸಿಯ ಮ್ಯಾಚ್ ರೆಫ್ರಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT