(ಬಡದಿಂದ) ಶ್ರೀನಾಥ್ ಮತ್ತಿತರ ಚಿತ್ರ 
ಕ್ರಿಕೆಟ್

ಟಿ-20 ವಿಶ್ವಕಪ್: ಅಂಪೈರ್ ಪಟ್ಟಿಯಲ್ಲಿ ಮೆನನ್, ರೆಫ್ರಿಯಾಗಿ ಜಾವಗಲ್ ಶ್ರೀನಾಥ್ ನೇಮಕ

ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ 20 ಅಂಪೈರ್ಸ್ ಮತ್ತು ರೆಫ್ರಿಗಳ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.

ನವದೆಹಲಿ: ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ 20 ಅಂಪೈರ್ಸ್ ಮತ್ತು ರೆಫ್ರಿಗಳ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಇದರಲ್ಲಿ 16 ಅಂಪೈರ್ ಗಳು ಹಾಗೂ ನಾಲ್ವರು ರೆಫ್ರಿಗಳ ಹೆಸರು ಇವೆ. ನಾಲ್ವರು ರೆಫರಿಗಳ ಪೈಕಿ ಕನ್ನಡಿಗ ಜಾವಗಲ್ ಶ್ರೀನಾಥ್ ಕೂಡಾ ಸ್ಥಾನ ಪಡೆದಿದ್ದಾರೆ.

16 ಅಂಪೈರ್ ಗಳಲ್ಲಿ ಭಾರತೀಯ ಅಂಪೈರ್ ನಿತಿನ್ ಮೆನನ್ ಅವರು ಸ್ಥಾನ ಪಡೆದಿದ್ದಾರೆ. ಈ ಮೂಲಕ 20 ಮಂದಿಯ ಪಟ್ಟಿಯಲ್ಲಿ ಇಬ್ಬರು ಭಾರತೀಯರಿಗೂ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಕಾರ್ಯನಿರ್ವಹಿಸುವ ಅವಕಾಶ ಲಭಿಸಿದೆ.  

ಭಾರತದ ಅತ್ಯಂತ ಶ್ರೇಷ್ಠ ಬೌಲರ್ ಗಳಲ್ಲಿ ಒಬ್ಬರೆನಿಸಿರುವ ಶ್ರೀನಾಥ್ ಆಟಗಾರನಾಗಿ ನಿವೃತ್ತಿಯಾದ ನಂತರ ಮ್ಯಾಚ್ ರೆಫ್ರಿಯಾಗಿ ಸೆಕೆಂಡ್ ಇನ್ನಿಂಗ್ಸ್ ಆಡುತ್ತಿದ್ದಾರೆ. 2006ರಿಂದ ಅವರು ಐಸಿಸಿಯ ಮ್ಯಾಚ್ ರೆಫ್ರಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT