ಎಂಎಸ್ ಧೋನಿ 
ಕ್ರಿಕೆಟ್

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯ: ಡೆಲ್ಲಿ ತಂಡವನ್ನು ಮಣಿಸಿ 9ನೇ ಬಾರಿಗೆ ಫೈನಲ್ ಪ್ರವೇಶಿಸಿದ ಧೋನಿ ಪಡೆ!

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದ ಅಂತಿಮ ಘಟ್ಟದಲ್ಲಿ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಬ್ಬರದ ಬ್ಯಾಟಿಂಗ್ ಮಾಡಿ 6 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ಬಾರಿಸುವ ಮೂಲಕ ಡೆಲ್ಲಿ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದೆ.

ದುಬೈ: ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದ ಅಂತಿಮ ಘಟ್ಟದಲ್ಲಿ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಬ್ಬರದ ಬ್ಯಾಟಿಂಗ್ ಮಾಡಿ 6 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ಬಾರಿಸುವ ಮೂಲಕ ಡೆಲ್ಲಿ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದ್ದು ಈ ಮೂಲಕ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ತಂಡ 9ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 

ಚೆನ್ನೈ ತಂಡ ಟೂರ್ನಿಯಲ್ಲಿ 3 ಬಾರಿ ಚಾಂಪಿಯನ್ ಆಗಿದ್ದರೆ, 5 ಬಾರಿ ರನ್ನರ್ ಅಪ್ ಆಗಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 5 ವಿಕೆಟ್ ಗೆ 172 ರನ್ ಗಳಿಸಿತು. ಆರಂಭಿಕ ಪೃಥ್ವಿ ಶಾ (60 ರನ್) ಮತ್ತು ನಾಯಕ ರಿಷಭ್ ಪಂತ್ (ಅಜೇಯ 51) ಗಳಿಸಿದ ಅರ್ಧ ಶತಕ ಗಳಿಸಿದ್ದರು. ಇದಕ್ಕೆ ಉತ್ತರವಾಗಿ ಚೆನ್ನೈ 19.4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. 

ಡೆಲ್ಲಿ ಪರ ಅಕ್ಷರ್ ಪಟೇಲ್ 10, ಶಿಮ್ರಾನ್ ಹೆಟ್ಮರ್ 37 ರನ್ ಗಳಿಸಿದ್ದಾರೆ. ಚೆನ್ನೈ ಪರ ಬೌಲಿಂಗ್ ನಲ್ಲಿ ಹೆಜಲ್ವುಡ್ 2, ಜಡೇಜಾ, ಮೋಯಿನ್ ಅಲಿ ಮತ್ತು ಬ್ರಾವೋ ತಲಾ 1 ವಿಕೆಟ್ ಪಡೆದಿದ್ದಾರೆ.

ಚೆನ್ನೈ ಪರ ಬ್ಯಾಟಿಂಗ್ ನಲ್ಲಿ ರುತುರಾಜ್ ಗಾಯಕ್ವಾಡ್ 70, ರಾಬಿನ್ ಉತ್ತಪ್ಪ 63, ಮೋಯಿನ್ ಅಲಿ 16 ಮತ್ತು ಎಂಎಸ್ ಧೋನಿ ಅಜೇಯ 18 ರನ್ ಬಾರಿಸಿದ್ದಾರೆ. 

ಈಗ ಅದೇ ಮೈದಾನದಲ್ಲಿ ಚೆನ್ನೈ ತಂಡ ಅಕ್ಟೋಬರ್ 15ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನಡುವಿನ ಎಲಿಮಿನೇಟರ್ ವಿಜೇತರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಎರಡನೇ ಕ್ವಾಲಿಫೈಯರ್ ವಿಜೇತರೊಂದಿಗೆ ಫೈನಲ್ ಆಡಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT