ಸುಮಿತ್ ಬನ್ಸಾಲ್ 
ಕ್ರಿಕೆಟ್

ಬಿಸಿಸಿಐ ಪ್ಯಾನಲ್ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ನಿಧನ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ(ಬಿಸಿಸಿಐ) ಸೇರಿದ ದೆಹಲಿ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು.

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ(ಬಿಸಿಸಿಐ) ಸೇರಿದ ದೆಹಲಿ ಅಂಪೈರ್ ಸುಮಿತ್ ಬನ್ಸಾಲ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು.

ಅಕ್ಟೋಬರ್ 2 ರಂದು ತಮಿಳುನಾಡು ಮತ್ತು ಹಿಮಾಚಲ ಪ್ರದೇಶ ನಡುವಿನ ಅಂಡರ್ -19 ವಿನೂ ಮಂಕಡ್ ಟ್ರೋಫಿ ಪಂದ್ಯದ ವೇಳೆ ಸುಮಿತ್ ಅವರಿಗೆ ಬಲವಾಗಿ ಚೆಂಡು ಬಿದ್ದಿದ್ದರಿಂದ ಕಣ್ಣಿಗೆ ಹತ್ತಿರ ಗಾಯವಾಗಿತ್ತು. ಸ್ವಲ್ಪ ಸಮಯದ ನಂತರ, ಸುಮಿತ್ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಎಲ್ಲವೂ ಸರಿಯಾಗಿದ್ದ ಎರಡು ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. 

ಆದಾಗ್ಯೂ, ಅವರ ಮುಖದ ಊತವು ಇನ್ನೂ ಹೋಗಿರಲಿಲ್ಲ. ಅಕ್ಟೋಬರ್ 8 ರಂದು, ಸುಮಿತ್‌ಗೆ ಎದೆ ನೋವು ಕಾಣಿಸಿಕೊಂಡಿತು. ಅಕ್ಟೋಬರ್ 9 ರಂದು ನೋವು ಮರುಕಳಿಸಿತು ಮತ್ತು ಅವರನ್ನು ಆಸ್ಪತ್ರೆಗೆ ಸೇರಿಸಬೇಕಾಯಿತು, ಅಲ್ಲಿ ಅವರು 10 ಅಕ್ಟೋಬರ್ ಬೆಳಿಗ್ಗೆ ನಿಧನರಾದರು.

ಸುಮಿತ್ 2006 ರಲ್ಲಿ ತಮ್ಮ ಅಂಪೈರಿಂಗ್ ವೃತ್ತಿಯನ್ನು ಆರಂಭಿಸಿದರು. ಅವರು ಒಂದು ಪ್ರಥಮ ದರ್ಜೆ ಮತ್ತು 19 ಲಿಸ್ಟ್ ಎ ಪಂದ್ಯಗಳೊಂದಿಗೆ ವಯೋಮಾನದ ಕ್ರಿಕೆಟ್‌ನಲ್ಲಿ ಕಾರ್ಯನಿರ್ವಹಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT