ಕೊಹ್ಲಿ 
ಕ್ರಿಕೆಟ್

ಐಪಿಎಲ್ 2021: ಮತ್ತೆ ನುಚ್ಚುನೂರಾದ ಟ್ರೋಫಿ ಆಸೆ; ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿದ ಆರ್ ಸಿಬಿ!

ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಟ್ರೋಫಿ ಗೆಲ್ಲುವ ಆಸೆ ನುಚ್ಚುನೂರಾಗಿದೆ. 

ಶಾರ್ಜಾ: ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಟ್ರೋಫಿ ಗೆಲ್ಲುವ ಆಸೆ ನುಚ್ಚುನೂರಾಗಿದೆ. 

ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ತಂಡದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಗಳಿಂದ ಸೋಲು ಅನುಭವಿಸಿದೆ. ಈ ಮೂಲಕ ಟ್ರೋಫಿ ಗೆಲ್ಲುವ ಆಸೆಗೆ ತಿಲಾಂಜಲಿ ಬಿಟ್ಟಿದೆ. 

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ್ದ ಆರ್ ಸಿಬಿ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 138 ರನ್ ಪೇರಿಸಲಷ್ಟೇ ಸಾಧ್ಯವಾಯಿತು. 139 ರನ್ ಗಳ ಗುರಿ ಬೆನ್ನಟ್ಟಿದ ಕೋಲ್ಕತ್ತಾ ಪಡೆ 6 ವಿಕೆಟ್ ನಷ್ಟಕ್ಕೆ 139 ರನ್ ಸಿಡಿಸುವ ಮೂಲಕ ಗೆಲುವಿನ ನಗೆ ಬೀರಿತು. 

ಬೌಲಿಂಗ್ (4 ವಿಕೆಟ್) ಮತ್ತು ಬ್ಯಾಟಿಂಗ್ (26) ನಲ್ಲಿ ಮಿಂಚಿದ ಸುನಿಲ್ ನರೈನ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. 

ಆರ್ ಸಿಬಿ ಪರ ಆರಂಭಿಕವಾಗಿ ಉತ್ತಮ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ 21 ರನ್ ಗಳಿಸಿ ಔಟಾಗಿದ್ದರೆ, ವಿರಾಟ್ ಕೊಹ್ಲಿ 39 ರನ್ ಪೇರಿಸಿದ್ದಾರೆ. ಇನ್ನುಳಿದಂತೆ ಯಾರು ಅಬ್ಬರ ಬ್ಯಾಟಿಂಗ್ ಮಾಡದ ಕಾರಣ ಆರ್ ಸಿಬಿ 138 ರನ್ ಗಳಿಸಷ್ಟೇ ಸಾಧ್ಯವಾಯಿತು. 

ಕೋಲ್ಕತ್ತಾ ಪರ ಬೌಲಿಂಗ್ ನಲ್ಲಿ ಸುನಿಲ್ ನರೈನ್ ಮಿಂಚಿದ್ದು 4 ವಿಕೆಟ್ ಪಡೆದಿದ್ದಾರೆ. ಇನ್ನು ಫರ್ಗ್ಯೂಸನ್ 2 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT