ಕ್ರಿಕೆಟ್

ಟಿ-20 ವಿಶ್ವಕಪ್: ಭಾರತ ತಂಡಕ್ಕೆ ಮಾರ್ಗದರ್ಶಕರಾಗಲು ಧೋನಿ ಗೌರವ ಧನ ಪಡೆಯುತ್ತಿಲ್ಲ- ಬಿಸಿಸಿಐ 

Nagaraja AB

ನವದೆಹಲಿ: ಮುಂಬರುವ ಟಿ-20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾಕ್ಕೆ ಮಾರ್ಗದರ್ಶಕರಾಗಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐನಿಂದ ಯಾವುದೇ ಶುಲ್ಕವನ್ನು ಪಡೆಯಲ್ಲ ಎಂದು ಕಾರ್ಯದರ್ಶಿ ಜಯ್ ಶಾ ಮಂಗಳವಾರ ಹೇಳಿದ್ದಾರೆ.

ಟಿ-20 ವಿಶ್ವಕಪ್ ಗಾಗಿ ಭಾರತ ತಂಡದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಲು ಎಂಎಸ್ ಧೋನಿ ಯಾವುದೇ ಗೌರವ ಧನ ಪಡೆಯುತ್ತಿಲ್ಲ ಎಂದು ಶಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ವಿರುದ್ಧ ಸೆಣಸಲಿದೆ.

SCROLL FOR NEXT