ರಾಹುಲ್ ತ್ರಿಪಾಠಿ 
ಕ್ರಿಕೆಟ್

ಕೊನೆಯ ಓವರ್ನಲ್ಲಿ ರೋಚಕ ಆಟ: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಕೆಕೆಆರ್

ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ ಅದ್ಭುತ ಅರ್ಧಶತಕ ಹಾಗೂ ಕೊನೆಯ ಓವರ್ ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ರಾಹುಲ್ ತ್ರಿಪಾಠಿ ಗೆಲುವು ತಂದುಕೊಟ್ಟಿದ್ದು, ಎರಡು ಬಾರಿಯ ಚಾಂಪಿಯನ್ ಕೆಕೆಆರ್ ಶುಕ್ರವಾರ ಮೂರು ಬಾರಿ ವಿಜೇತ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ ನಲ್ಲಿ ಸೆಣೆಸಲಿದೆ. 

ಶಾರ್ಜಾ: ಆರಂಭಿಕ ಆಟಗಾರ ವೆಂಕಟೇಶ್ ಅಯ್ಯರ್ ಅದ್ಭುತ ಅರ್ಧಶತಕ ಹಾಗೂ ಕೊನೆಯ ಓವರ್ ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ರಾಹುಲ್ ತ್ರಿಪಾಠಿ ಗೆಲುವು ತಂದುಕೊಟ್ಟಿದ್ದು, ಎರಡು ಬಾರಿಯ ಚಾಂಪಿಯನ್ ಕೆಕೆಆರ್ ಶುಕ್ರವಾರ ಮೂರು ಬಾರಿ ವಿಜೇತ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ ನಲ್ಲಿ ಸೆಣೆಸಲಿದೆ. 

26 ವರ್ಷದ ಅಯ್ಯರ್ 41 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್‌ ನೆರವಿನಿಂದ 55 ರನ್ ಬಾರಿಸಿ ಮಿಂಚಿದರು. ಅಯ್ಯರ್ ಶುಭಮನ್ ಗಿಲ್ ಜೊತೆ ಆರಂಭಿಕ ವಿಕೆಟ್ ಗೆ 96 ರನ್ ಜೊತೆಯಾಟ ನೀಡಿದರು. ಆದರೆ ಕೆಕೆಆರ್ ಏಳು ರನ್ ಗಳಿಗೆ ಐದು ವಿಕೆಟ್ ಕಳೆದುಕೊಂಡಾಗ ಪಂದ್ಯವು ನಾಟಕೀಯ ತಿರುವು ಪಡೆದುಕೊಂಡಿತು.

ಕೆಕೆಆರ್ 15.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿತು. ತದ ನಂತರ ಬ್ಯಾಕ್ ಟು ಬ್ಯಾಕ್ ನಾಲ್ಕು ವಿಕೆಟ್ ಗಳು ಬಿದ್ದವು. ಇದರೊಂದಿಗೆ ಬ್ಯಾಟಿಂಗ್ ಕುಸಿತವನ್ನು ಅನುಭವಿಸಿತು. ಇನ್ನು ಕೊನೆಯ ಎರಡು ಎಸೆತದಲ್ಲಿ 6 ರನ್ ಬೇಕಿತ್ತು. ಈ ವೇಳೆ ರಾಹುಲ್ ತ್ರಿಪಾಠಿ ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. 

2012 ಮತ್ತು 2014ರಲ್ಲಿ ಪ್ರಶಸ್ತಿ ಗೆದ್ದ ನಂತರ ಇದು ಕೆಕೆಆರ್ ಅವರ ಮೂರನೇ ಅಂತಿಮ ಪ್ರದರ್ಶನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT