ಮೊಹಮ್ಮದ್ ಅಮೀರ್ 
ಕ್ರಿಕೆಟ್

ಟೀಂ ಇಂಡಿಯಾ ಈ ವೇಗಿ ವಿಶ್ವದ ಅತ್ಯುತ್ತಮ ಟಿ20 ಬೌಲರ್‌: ಪಾಕ್‌ ಮಾಜಿ ವೇಗಿ ಹೊಗಳಿದ್ದು ಯಾರನ್ನ ಗೊತ್ತ?

ಟಿ20 ವಿಶ್ವಕಪ್‌ 202ರಲ್ಲಿ ಸಾಂಪ್ರಾದಾಯಿಕ ಎದುರಾಳಿಗಳ ನಡುವೆ ನಾಳೆ ನಡೆಯಲಿರುವ ಪಂದ್ಯದ ಬಗ್ಗೆ ಕ್ರಿಕೆಟ್‌ ಅಭಿಮಾನಿಗಳಲ್ಲಿ ತೀವ್ರ ಕಾತುರ ಮನೆ ಮಾಡಿದೆ.

ಇಸ್ಲಾಮಾಬಾದ್‌: ಟಿ20 ವಿಶ್ವಕಪ್‌ 202ರಲ್ಲಿ ಸಾಂಪ್ರಾದಾಯಿಕ ಎದುರಾಳಿಗಳ ನಡುವೆ ನಾಳೆ ನಡೆಯಲಿರುವ ಪಂದ್ಯದ ಬಗ್ಗೆ ಕ್ರಿಕೆಟ್‌ ಅಭಿಮಾನಿಗಳಲ್ಲಿ ತೀವ್ರ ಕಾತುರ ಮನೆ ಮಾಡಿದೆ.

ಟೀಂ ಇಂಡಿಯಾ, ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಉಳಿದುಕೊಂಡಿದ್ದು, ಈ ಕ್ರಮದಲ್ಲಿ ಹೈ ವೋಲ್ಟೇಜ್ ಪಂದ್ಯದ ಬಗ್ಗೆ ಭಾರಿ ಕುತೂಹಲ ಮೂಡಿಸಿದೆ. 

ಟೀಂ ಇಂಡಿಯಾ ವಿರುದ್ಧ ಆಡಲಿರುವ ತನ್ನ ತಂಡವನ್ನು ಪಾಕಿಸ್ತಾನ ಪ್ರಕಟಿಸಿದೆ. ಆದರೆ, ವಿಶ್ವಕಪ್‌ನಲ್ಲಿ ಪಾಕಿಸ್ತಾನ ಈವರೆಗೆ ಭಾರತದ ವಿರುದ್ಧ ಒಂದೇ ಒಂದು ಪಂದ್ಯ ಗೆದ್ದಿಲ್ಲ. ಈ ಬಾರಿ ಪಂದ್ಯ ಗೆದ್ದು ತನ್ನ ಘನತೆ ಉಳಿಸಿಕೊಳ್ಳಲು ಪಾಕಿಸ್ತಾನ ಬಯಸುತ್ತಿದೆ. ಆದರೆ, ಮತ್ತೊಮ್ಮೆ ದಾಯಾದಿ ದೇಶದ ತಂಡದ ಮೇಲೆ ವಿಜಯ  ಸಾಧಿಸಿ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಲು ಭಾರತ ಉತ್ಸುಕವಾಗಿದೆ.

ಆದರೆ, ಈ ಪಂದ್ಯದ ಹಿನ್ನಲೆಯಲ್ಲಿ ಭಾರತೀಯ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನದ ಮಾಜಿ ವೇಗಿ ಮಹಮ್ಮದ್‌ ಅಮೀರ್‌ ಪ್ರಶಂಸೆಯ ಮಳೆ ಹರಿಸಿದ್ದಾರೆ. ಬುಮ್ರಾ ಅವರನ್ನು ಪಾಕಿಸ್ತಾನದ ವೇಗದ ಬೌಲರ್‌ ಶಾಹೀನ್ ಅಫ್ರಿದಿಯೊಂದಿಗೆ ಹೋಲಿಸುವುದು ಅವಿವೇಕ ಎಂದು ಅಮೀರ್ ಹೇಳಿದ್ದಾರೆ.

ಬುಮ್ರಾಗಿರುವ ಅನುಭವ ಅಫ್ರಿದಿ ಅವರಿಗಿಲ್ಲ. ಶಾಹೀನ್ ಇನ್ನೂ ಕಲಿಯುವುದು ಬಹಳಷ್ಟು ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬುಮ್ರಾ ವಿಶ್ವದ ಅತ್ಯುತ್ತಮ ಟಿ20 ಬೌಲರ್ ಎಂದು ಕೊಂಡಾಡಿದ್ದಾರೆ. ವಿಶೇಷವಾಗಿ ಡೆತ್ ಓವರ್‌ ವಿಷಯಗಳಿಗೆ ಬಂದಾಗ. ಎದುರಾಳಿ ಬ್ಯಾಟ್ಸ್‌ಮನ್‌ ಗಳು ಬೆವರುವಂತೆ ಮಾಡುವುದು ಬುಮ್ರಾ ಅವರ ವಿಶೇಷ ಎಂದು ಅಮೀರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT