ಸಂಗ್ರಹ ಚಿತ್ರ 
ಕ್ರಿಕೆಟ್

ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತದ ಸೋಲಿನ ಬಗ್ಗೆ ಇತರ ಆಟಗಾರರು ಹೇಳಿದ್ದೇನು?

ಶಾಹೀನ್ ಅವರ ಆರಂಭಿಕ ಆಟ ಪಂದ್ಯದ ಗತಿಯನ್ನು ಬದಲಿಸಿತು. ಭಾರತ ತಂಡದಲ್ಲಿ ಕೆಲವು ಬದಲಾವಣೆಯಾಗಲು ಮತ್ತು ಇನ್ನಷ್ಟು ಶಕ್ತಿ ಗಳಿಸಿಕೊಳ್ಳಲು ಇನ್ನು ಸಮಯವಿದೆ ಎಂದು ಚೇತೇಶ್ವರ್ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಭಾರತ ಪಾಕಿಸ್ತಾನದ ಎದುರು ಅನುಭವಿಸಿದ ಮೊದಲ ಸೋಲು. ಈ ಬಗ್ಗೆ ಇತರೆ ಕ್ರಿಕೆಟಿಗರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್‌ ಚೇತೇಶ್ವರ್ ಪೂಜಾರ ಈ ಬಗ್ಗೆ ಕೂ ಮಾಡಿದ್ದು, 'ಭಾರತದ ಪಾಲಿಗೆ ನಿನ್ನೆಯ ಪಂದ್ಯ ಉತ್ತಮ ಆರಂಭವೇನಲ್ಲ, ಆದರೆ ಅತ್ಯುತ್ತಮ ತಂಡವನ್ನು ಹೊಂದಿದ ಪಾಕಿಸ್ತಾನಕ್ಕೆ ಗೆಲುವಿನ ಶ್ರೇಯ ದಕ್ಕಲೇಬೇಕು. ಟಾಸ್ / ಇಬ್ಬನಿ ಖಂಡಿತ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ.  

ಜೊತೆಗೆ ಶಾಹೀನ್ ಅವರ ಆರಂಭಿಕ ಆಟ ಪಂದ್ಯದ ಗತಿಯನ್ನು ಬದಲಿಸಿತು. ಭಾರತ ತಂಡದಲ್ಲಿ ಕೆಲವು ಬದಲಾವಣೆಯಾಗಲು ಮತ್ತು ಇನ್ನಷ್ಟು ಶಕ್ತಿ ಗಳಿಸಿಕೊಳ್ಳಲು ಇನ್ನು ಸಮಯವಿದೆ. ಮುಂದಿನ ಪಂದ್ಯಗಳಲ್ಲಿ ಭಾರತ ಪುಟಿದೇಳುವುದರಲ್ಲಿ ನನಗೆ ಸಂದೇಹವೇ ಇಲ್ಲ!' ಎಂದು ಹೇಳಿದ್ದಾರೆ. 

ಪಾಕ್ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಮ್ , 'ಪಾಕಿಸ್ತಾನವು ಇಂದು ಸಂಘಟಿತ ಮತ್ತು ಸ್ಥಿರ ತಂಡವಾಗಿ ಕಾಣುತ್ತಿದೆ. ರಿಜ್ವಾನ್ ಬಗೆಗಿನ ನಿಲುವು ಮತ್ತು ನಾಯಕತ್ವಕ್ಕೆ ಬಾಬರ್ ಅವರಿಗೆ ಸಂಪೂರ್ಣ ಕ್ರೆಡಿಟ್ ಹೋಗಬೇಕು. ಶಾಹೀನ್ ಮತ್ತು ರೌಫ್ ಅದ್ಭುತ ಬೌಲಿಂಗ್ ನಿಂದ ಗಮನ ಸೆಳೆದರು. 

ಶಾಹೀನ್ ಅವರ ಆರಂಭಿಕ ದಾಳಿಗಳು ಭಾರತದ ಬ್ಯಾಟಿಂಗ್ ಅನ್ನು ಸಂಪೂರ್ಣವಾಗಿ ಕುಗ್ಗಿಸಿತು. ಕೊಹ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ಆದರೆ ಬೌಲಿಂಗ್ ಕುರಿತ ಭಾರತದ ಯೋಜನೆ ಹಾಗು  ಒಬ್ಬ ಬೌಲರ್ ಕೊರತೆಯನ್ನು ಎದ್ದು ಕಾಣುತಿತ್ತು. ಬ್ಯಾಟಿಂಗ್ ನಲ್ಲಿ ಆರನೇ ಆಯ್ಕೆಯ ಕೊರತೆ ಭಾರತಕ್ಕೆ ನೋವುಂಟು ಮಾಡಿದೆ' ಎಂದು ಕೂ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿ. 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

ಬಳ್ಳಾರಿ: ಗಣಿಗಾರಿಕೆ ಚಟುವಟಿಕೆಗಳಿಂದ 'ದೇವದಾರು' ಅರಣ್ಯ ಉಳಿಸಲು ರೈತರಿಂದ 'ಅಪ್ಪಿಕೊ' ಚಳುವಳಿ !

SCROLL FOR NEXT