ಸಂಗ್ರಹ ಚಿತ್ರ 
ಕ್ರಿಕೆಟ್

T20 WC: ಕಿವೀಸ್ ವಿರುದ್ಧ ಸೇಡು ತೀರಿಸಿಕೊಂಡ ಪಾಕ್! ಟೀಂ ಇಂಡಿಯಾ ಸೆಮಿಫೈನಲ್ ಹಾದಿ ಸುಗಮ?

ಟಿ20 ವಿಶ್ವಕಪ್ ನಲ್ಲಿ ಅದ್ಭುತ ಪಂದ್ಯಗಳು ನಡೆಯುತ್ತಿವೆ. ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಮಧ್ಯದ ನಿನ್ನೆ ನಡೆದ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಪಾಕ್ ಹಾಗೂ ನ್ಯೂಜಿಲೆಂಡ್ ಮಧ್ಯೆ ಸೇಡಿನ ಪಂದ್ಯ ಅಂತಾನೇ ಕರೆಯಲಾಗುತ್ತಿದ್ದ ಈ ಮ್ಯಾಚ್ ನಲ್ಲಿ ಬಾಬರ್ ಪಡೆ ಗೆಲುವು ಸಾಧಿಸಿದೆ. 

ದುಬೈ: ಟಿ20 ವಿಶ್ವಕಪ್ ನಲ್ಲಿ ಅದ್ಭುತ ಪಂದ್ಯಗಳು ನಡೆಯುತ್ತಿವೆ. ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಮಧ್ಯದ ನಿನ್ನೆ ನಡೆದ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಪಾಕ್ ಹಾಗೂ ನ್ಯೂಜಿಲೆಂಡ್ ಮಧ್ಯೆ ಸೇಡಿನ ಪಂದ್ಯ ಅಂತಾನೇ ಕರೆಯಲಾಗುತ್ತಿದ್ದ ಈ ಮ್ಯಾಚ್ ನಲ್ಲಿ ಬಾಬರ್ ಪಡೆ ಗೆಲುವು ಸಾಧಿಸಿದೆ. 

ಕಿವೀಸ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸುವ ಮೂಲಕ ಗ್ರುಪ್ 2ರಲ್ಲಿ ಅಗ್ರಸ್ಥಾನ ಉಳಿಸಿಕೊಳ್ಳುವಲ್ಲಿ ಪಾಕಿಸ್ತಾನ ಸಫಲವಾಯಿತು. ಒಂಂದು ಹಂತದಲ್ಲಿ ರೋಮಾಂಚಕಾರಿಯಾಗಿದ್ದ ಪಂದ್ಯದಲ್ಲಿ ಪಾಕ್ ಬ್ಯಾಟ್ಸಮನ್ ಗಳು ಸ್ಫೋಟಕ ಬ್ಯಾಟಿಂಗ್ ಮಾಡಿದ್ದರಿಂದ ಬಾಬರ್ ಪಡೆ ವಿಜಯಶಾಲಿಯಾಯಿತು. ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿ 135 ರನ್ ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನತ್ತಿದ್ದ ಪಾಕ್, 19 ಓವರ್ ಗಳಿಗೆ ಗೆಲುವು ಸಾಧಿಸಿತು.

ಸೇಡು ತೀರಿಸಿಕೊಂಡ ಪಾಕ್!
ಟಿ20 ವಿಶ್ವಕಪ್ ಗೂ ಮುನ್ನ ನ್ಯೂಜಿಲ್ಯಾಂಡ್ ತಂಡ ಪಾಕಿಸ್ತಾನದಲ್ಲಿ ಸರಣಿ ಆಡಬೇಕಿತ್ತು. ಆದರೆ ಪಾಕಿಸ್ತಾನದಲ್ಲಿನ ಭದ್ರತೆ ವಿಚಾರವಾಗಿ ನ್ಯೂಜಿಲ್ಯಾಂಡ್ ತಂಡ ಅಲ್ಲಿ ಸರಣಿ ಆಡಲು ನಿರಾಕರಿಸಿ, ತವರಿಗೆ ವಾಪಸ್ ಆಗಿತ್ತು. ಈ ಸಮಯದಲ್ಲಿ ಪಾಕ್ ಹಾಗೂ ನ್ಯೂಜಿಲ್ಯಾಂಡ್ ಮಧ್ಯೆ ಮಾತಿನ ಯುದ್ಧವೂ ನಡೆದಿತ್ತು. ಆದ್ದರಿಂದ ಪಾಕಿಸ್ತಾನ ಅಭಿಮಾನಿಗಳ ಪಾಲಿಗೆ ನಿನ್ನೆ ಪಂದ್ಯ ಕುತೂಹಲಕ್ಕೆ ಕಾರಣವಾಗಿತ್ತು. ಹಲವು ದಿನಗಳಿಂದ ಇದ್ದಂಥ ಕಿವೀಸ್ ಸೋಲಿಸುವ ಬರವನ್ನು ಬಾಬರ್ ನೇತೃತ್ವದ ತಂಡ ಈಡೇರಿಸಿಕೊಂಡಿದೆ. 

ಟೀಂ ಇಂಡಿಯಾದ ಸೆಮಿಫೈನಲ್ ಹಾದಿ ಸುಗಮ?
ಪಾಕಿಸ್ತಾನದ ಈ ಗೆಲುವು ಟೀಂ ಇಂಡಿಯಾ ಸೆಮಿಫೈನಲ್ ಹಂತಕ್ಕೆ ಏರುವ ಆಸೆಯನ್ನು ಜೀವಂತವಾಗಿರಿಸಿದೆ. ಸದ್ಯ ಕೊಹ್ಲಿ ಪಡೆಯ ಮೇಲೆ ಒತ್ತಡ ಹೆಚ್ಚಾಗಿದ್ದು ಅಕ್ಟೋಬರ್ 31ರ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯ ಗೆಲ್ಲಬೇಕು ಹಾಗೂ ಮುಂಬರುವ ಇನ್ನುಳಿದ ಪಂದ್ಯಗಳಲ್ಲಿ ಜಯ ಸಾಧಿಸಬೇಕಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT