ಮಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

ಧೋನಿ ವಿರುದ್ಧ ಹಿತಾಸಕ್ತಿ ಸಂಘರ್ಷದ ದೂರು

ಟಿ-20 ವಿಶ್ವಕಪ್ ಗಾಗಿ ಟೀಂ ಇಂಡಿಯಾದ ಮಾರ್ಗದರ್ಶಕರಾಗಿ  ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಕ ಮಾಡಿರುವುದರ ವಿರುದ್ಧ ಗುರುವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಗೆ ಹಿತಾಸಕ್ತಿ ಸಂಘರ್ಘ ದೂರು ದಾಖಲಾಗಿದೆ.

ನವದೆಹಲಿ: ಟಿ-20 ವಿಶ್ವಕಪ್ ಗಾಗಿ ಟೀಂ ಇಂಡಿಯಾದ ಮಾರ್ಗದರ್ಶಕರಾಗಿ  ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಕ ಮಾಡಿರುವುದರ ವಿರುದ್ಧ ಗುರುವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಗೆ ಹಿತಾಸಕ್ತಿ ಸಂಘರ್ಘ ದೂರು ದಾಖಲಾಗಿದೆ.

ಈ ಹಿಂದೆ ಆಟಗಾರರು ಹಾಗೂ ಆಡಳಿತಗಾರರ ವಿರುದ್ಧ ಸರಣಿ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಮಾಜಿ ಸದಸ್ಯ ಸಂಜೀವ್ ಗುಪ್ತಾ, ಅಪೆಕ್ಸ್ ಕೌನ್ಸಿಲ್ ಸದಸ್ಯರಿಗೆ ಪತ್ರ ಕಳುಹಿಸಿದ್ದು,  ಧೋನಿ ನೇಮಕ ಹಿತಾಸಕ್ತಿ ಸಂಘರ್ಷ ಷರತ್ತಿನ ಉಲ್ಲಂಘನೆಯಾಗಿದೆ. ಇದರಡಿ ಒಬ್ಬರು ಎರಡು ಹುದ್ದೆಗಳನ್ನು ಹೊಂದುವಂತಿಲ್ಲ ಎಂದಿದ್ದಾರೆ.

ಧೋನಿ ಸದ್ಯ ಐಪಿಎಲ್ ಟೂರ್ನಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಪರಿಣಾಮಗಳನ್ನು ಪರಿಶೀಲಿಸಲು ಅಪೆಕ್ಸ್ ಕೌನ್ಸಿಲ್ ತನ್ನ ಕಾನೂನು ತಂಡವನ್ನು ಸಂಪರ್ಕಿಸಬೇಕಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿ ಅವರನ್ನು ಇದೀಗ ಟೀಂ ಇಂಡಿಯಾ ಮಾರ್ಗದರ್ಶಕರಾಗಿ ನೇಮಕ ಮಾಡಿರುವುದು ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT