ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 
ಕ್ರಿಕೆಟ್

ಟೀಂ ಇಂಡಿಯಾ ಟಿ-20 ತಂಡದ ನೂತನ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿ ರೋಹಿತ್ ಶರ್ಮಾ 

ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ  ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಕಟವಾದ ನಂತರ ಇದೀಗ ಸಹಜವಾಗಿ ಮುಂದಿನ ನಾಯಕರು ಯಾರು ಎಂಬ ಚರ್ಚೆ ಆರಂಭವಾಗಿದೆ. 

ಚೆನ್ನೈ:  ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ  ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಕಟವಾದ ನಂತರ ಇದೀಗ ಸಹಜವಾಗಿ ಮುಂದಿನ ನಾಯಕರು ಯಾರು ಎಂಬ ಚರ್ಚೆ ಆರಂಭವಾಗಿದೆ. 

2017 ರಿಂದ ಎಲ್ಲಾ ಮಾದರಿಯ ನಾಯಕನಾಗಿ ಟೀಂ ಇಂಡಿಯಾವನ್ನು ಮುಂದುವರೆಸಿಕೊಂಡು ಬಂದಿದ್ದರಿಂದ ತೀವ್ರ ಕೆಲಸದ ಒತ್ತಡ ಇದ್ದಿದ್ದಾಗಿ ಅವರು ಹೇಳಿದ್ದಾರೆ. ಆದಾಗ್ಯೂ, ಬ್ಯಾಟ್ಸ್ ಮನ್ ಆಗಿ ಮುಂದುವರೆಯುವುದಾಗಿ 32 ವರ್ಷದ ಕೊಹ್ಲಿ ಗುರುವಾರ ಟ್ವೀಟ್ ಮೂಲಕ ತಿಳಿಸಿದ್ದರು. 

ಒಂದು ವೇಳೆ ಟಿ-20 ಪಂದ್ಯದ ನಾಯಕರಾಗಿ ಐದು ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿರುವ ರೋಹಿತ್ ಶರ್ಮಾ  ಬಿಟ್ಟು ಬೇರೆ ಯಾರಾದರೂ ಕೊಹ್ಲಿಯಿಂದ ತೆರವಾಗುವ ನಾಯಕನ ಸ್ಥಾನ ಪಡೆದರೆ ಅದು ದೊಡ್ಡ ಆಶ್ಚರ್ಯ ಎನಿಸಲಿದೆ. 

ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ 45 ಪಂದ್ಯಗಳಲ್ಲಿ 27 ಪಂದ್ಯಗಳನ್ನು ಗೆದಿದ್ದರೆ,  ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ ತಂಡ ಗೆಲ್ಲುವಲ್ಲಿ  ರೋಹಿತ್ ಶರ್ಮಾ ಅವರ ನಾಯಕತ್ವ ಪ್ರಮುಖ ಪಾತ್ರ ವಹಿಸಿದೆ. ರೋಹಿತ್ ಶರ್ಮಾ ಎಲ್ಲಾ ಮಾದರಿಯ ಆಟಗಾರರಾಗಿದ್ದು, ತಂಡದಲ್ಲಿ ಅವರ ಬೆಳವಣಿಗೆ ಹಾಗೂ ಕೌಶಲ್ಯ ವೃದ್ಧಿಸುವಲ್ಲಿಯೂ ಅವರು ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. 

2023ರಲ್ಲಿ ನಡೆಯಲಿರುವ ಏಕದಿನ ಪಂದ್ಯಗಳ ವಿಶ್ವಕಪ್ ನಲ್ಲಿ ಕ್ಯಾಪ್ಟನ್ ಆಗಲು ಕೊಹ್ಲಿ ಬಯಿಸಿದರೆ, ರೊಹಿತ್ ಕೂಡಾ ನಾಯಕತ್ವ ಸ್ಥಾನದ ಮೇಲೆ ಕಣ್ಣಿಡಬಹುದು, ಆದಾಗ್ಯೂ, ಎರಡು ವಿಶ್ವಕಪ್ ಮುಂದಿರುವಂತೆ ಈ ಸಂದರ್ಭದಲ್ಲಿ ನಿಗದಿತ ಓವರ್ ಗಳ ಪಂದ್ಯದ ಟೀಂ ಇಂಡಿಯಾದ ನಾಯಕತ್ವ ವಹಿಸಲು ರೋಹಿತ್ ಸೂಕ್ತ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT