ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 
ಕ್ರಿಕೆಟ್

ಟೀಂ ಇಂಡಿಯಾ ಟಿ-20 ತಂಡದ ನೂತನ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿ ರೋಹಿತ್ ಶರ್ಮಾ 

ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ  ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಕಟವಾದ ನಂತರ ಇದೀಗ ಸಹಜವಾಗಿ ಮುಂದಿನ ನಾಯಕರು ಯಾರು ಎಂಬ ಚರ್ಚೆ ಆರಂಭವಾಗಿದೆ. 

ಚೆನ್ನೈ:  ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ  ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಕಟವಾದ ನಂತರ ಇದೀಗ ಸಹಜವಾಗಿ ಮುಂದಿನ ನಾಯಕರು ಯಾರು ಎಂಬ ಚರ್ಚೆ ಆರಂಭವಾಗಿದೆ. 

2017 ರಿಂದ ಎಲ್ಲಾ ಮಾದರಿಯ ನಾಯಕನಾಗಿ ಟೀಂ ಇಂಡಿಯಾವನ್ನು ಮುಂದುವರೆಸಿಕೊಂಡು ಬಂದಿದ್ದರಿಂದ ತೀವ್ರ ಕೆಲಸದ ಒತ್ತಡ ಇದ್ದಿದ್ದಾಗಿ ಅವರು ಹೇಳಿದ್ದಾರೆ. ಆದಾಗ್ಯೂ, ಬ್ಯಾಟ್ಸ್ ಮನ್ ಆಗಿ ಮುಂದುವರೆಯುವುದಾಗಿ 32 ವರ್ಷದ ಕೊಹ್ಲಿ ಗುರುವಾರ ಟ್ವೀಟ್ ಮೂಲಕ ತಿಳಿಸಿದ್ದರು. 

ಒಂದು ವೇಳೆ ಟಿ-20 ಪಂದ್ಯದ ನಾಯಕರಾಗಿ ಐದು ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿರುವ ರೋಹಿತ್ ಶರ್ಮಾ  ಬಿಟ್ಟು ಬೇರೆ ಯಾರಾದರೂ ಕೊಹ್ಲಿಯಿಂದ ತೆರವಾಗುವ ನಾಯಕನ ಸ್ಥಾನ ಪಡೆದರೆ ಅದು ದೊಡ್ಡ ಆಶ್ಚರ್ಯ ಎನಿಸಲಿದೆ. 

ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ 45 ಪಂದ್ಯಗಳಲ್ಲಿ 27 ಪಂದ್ಯಗಳನ್ನು ಗೆದಿದ್ದರೆ,  ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ ತಂಡ ಗೆಲ್ಲುವಲ್ಲಿ  ರೋಹಿತ್ ಶರ್ಮಾ ಅವರ ನಾಯಕತ್ವ ಪ್ರಮುಖ ಪಾತ್ರ ವಹಿಸಿದೆ. ರೋಹಿತ್ ಶರ್ಮಾ ಎಲ್ಲಾ ಮಾದರಿಯ ಆಟಗಾರರಾಗಿದ್ದು, ತಂಡದಲ್ಲಿ ಅವರ ಬೆಳವಣಿಗೆ ಹಾಗೂ ಕೌಶಲ್ಯ ವೃದ್ಧಿಸುವಲ್ಲಿಯೂ ಅವರು ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. 

2023ರಲ್ಲಿ ನಡೆಯಲಿರುವ ಏಕದಿನ ಪಂದ್ಯಗಳ ವಿಶ್ವಕಪ್ ನಲ್ಲಿ ಕ್ಯಾಪ್ಟನ್ ಆಗಲು ಕೊಹ್ಲಿ ಬಯಿಸಿದರೆ, ರೊಹಿತ್ ಕೂಡಾ ನಾಯಕತ್ವ ಸ್ಥಾನದ ಮೇಲೆ ಕಣ್ಣಿಡಬಹುದು, ಆದಾಗ್ಯೂ, ಎರಡು ವಿಶ್ವಕಪ್ ಮುಂದಿರುವಂತೆ ಈ ಸಂದರ್ಭದಲ್ಲಿ ನಿಗದಿತ ಓವರ್ ಗಳ ಪಂದ್ಯದ ಟೀಂ ಇಂಡಿಯಾದ ನಾಯಕತ್ವ ವಹಿಸಲು ರೋಹಿತ್ ಸೂಕ್ತ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT