ಆರ್ ಸಿಬಿ 
ಕ್ರಿಕೆಟ್

ಐಪಿಎಲ್-2021: ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್ ಸಿಬಿಗೆ 7 ವಿಕೆಟ್ ಗಳ ಭರ್ಜರಿ ಜಯ

ದುಬೈ ನಲ್ಲಿ ನಡೆದ 43 ನೇ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ 7 ವಿಕೆಟ್ ಗಳ ಜಯ ಗಳಿಸಿದೆ.

ದುಬೈ: ದುಬೈ ನಲ್ಲಿ ನಡೆದ 43 ನೇ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ 7 ವಿಕೆಟ್ ಗಳ ಜಯ ಗಳಿಸಿದೆ.

ಈ ಪಂದ್ಯವನ್ನು ಸೋತಿರುವುದರಿಂದ ರಾಜಸ್ಥಾನ ರಾಯಲ್ಸ್ ತಂಡದ ಪ್ಲೇ ಆಫ್ ಕನಸು ಕ್ಷೀಣಿಸಿದೆ. ಇನ್ನು ಪಂದ್ಯವನ್ನು ಗೆದ್ದಿರುವ ಆರ್ ಸಿಬಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದು ಪ್ಲೇ ಆಫ್ ಗೆ ಹೋಗುವುದು ಬಹುತೇಕ ಖಚಿತಗೊಂಡಿದೆ. 

ಆರ್ ಆರ್- ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಅತ್ಯುತ್ತಮ ಆರಂಭ ಲಭಿಸಿತು.

ಎವಿನ್ ಲೂಯಿಸ್ (37 ಎಸೆತಗಳಲ್ಲಿ 58 ರನ್) ಹಾಗೂ ಯಶಸ್ವಿ ಜೈಸ್ವಾಲ್ (22 ಎಸೆತಗಳಲ್ಲಿ 31 ರನ್) ಗಳಿಸಿ ತಂಡಕ್ಕೆ ಉತ್ತಮ ಆರಂಭವನ್ನೇನೋ ನೀಡಿದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಲೈನ್ ಕುಸಿತದ ಪರಿಣಾಮ ಆರ್ ಆರ್ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗದೇ 20 ಓವರ್ ಗಳಲ್ಲಿ 9 ವಿಕೆಟ್ ಗಳ ನಷ್ಟಕ್ಕೆ 149 ರನ್ ಗಳಿಸಿತು.

ಸಾಧಾರಣ ರನ್ ಮೊತ್ತವನ್ನು ಬೆನ್ನಟ್ಟಿದ ಆರ್ ಸಿಬಿ ತಂಡ 17.1 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಪಂದ್ಯ ಗೆದ್ದಿದೆ. 

ಆರ್ ಸಿಬಿ ಪರ ವಿರಾಟ್ ಕೊಹ್ಲಿ (20 ಎಸೆತಗಳಲ್ಲಿ 25) ದೇವದತ್ ಪಡಿಕ್ಕಲ್ (17 ಎಸೆತಗಳಲ್ಲಿ 22 ರನ್) ಶ್ರೀಕಾಂತ್ ಭರತ್ (35 ಎಸೆತಗಳಲ್ಲಿ 44 ರನ್)  ಗ್ಲೆನ್ ಮ್ಯಾಕ್ಸ್ ವೆಲ್ 30 ಎಸೆತಗಳಲ್ಲಿ 50 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಪ್ಲೇ ಆಫ್ ಸಂಭಾವ್ಯ ತಂಡಗಳು: 

ಸಿಎಸ್ ಕೆ ಹಾಗೂ ಡೆಲ್ಲಿ ತಂಡಗಳು ಈಗಾಗಲೇ ಮೊದಲೆರಡು ಸ್ಥಾನಗಳಲ್ಲಿದ್ದು ಪ್ಲೇ ಆಫ್ ಗೆ ಖಚಿತಗೊಂಡಿವೆ. ಈಗ ಆರ್ ಸಿಬಿ 3 ನೇ ಸ್ಥಾನದಲ್ಲಿದ್ದರೂ, ರನ್ ರೇಟ್ ಕಡಿಮೆ ಇರುವುದರಿಂದ ಪ್ಲೇ ಆಫ್ ನ ಕನಸು ನನಸಾಗಬೇಕಾದರೆ ಬಾಕಿ ಇರುವ 3 ಪಂದ್ಯಗಳ ಪೈಕಿ 1 ಪಂದ್ಯವನ್ನು ಅಗತ್ಯವಾಗಿ ಗೆಲ್ಲಲೇಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT