ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ತಂಡಕ್ಕೆ ಕೊಹ್ಲಿ ವಾಪಸ್; ಬೂಮ್ರಾ ಟೂರ್ನಿಯಿಂದ ಹೊರಗೆ

ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.

ನವದೆಹಲಿ: ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಭುವನೇಶ್ವರ್ ಕುಮಾರ್ ನೇತೃತ್ವದಲ್ಲಿ ಬೌಲಿಂಗ್ ದಾಳಿ ನಡೆಸಲಾಗುತ್ತದೆ. ಆದಾಗ್ಯೂ, ಅಕ್ಸರ್ ಪಟೇಲ್, ಶ್ರೇಯಸ್ ಅಯ್ಯರ್  ಮತ್ತು ದೀಪಕ್ ಚಾಹರ್ ಅವರನ್ನು ಸ್ಟ್ಯಾಂಡ್‌ ಬೈ ಆಟಗಾರರಾಗಿ ಇರಿಸಲಾಗಿದೆ. ಇಶಾನ್ ಕಿಶಾನ್ ಗೆ ಅವಕಾಶ ಸಿಕ್ಕಿಲ್ಲ. ದೀಪಕ್ ಹೂಡಾ ಅವರೊಂದಿಗೆ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಪಂದ್ಯವಾಡಲು ಭಾರತ ನಿರ್ಧರಿಸಿದೆ. 

ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯದ ಕಾರಣದಿಂದಾಗಿ ಆಯ್ಕೆಗೆ ಲಭ್ಯವಾಗಿಲ್ಲ.  ಅವರು ಪ್ರಸ್ತುತ ಬೆಂಗಳೂರಿನ ಎನ್‌ಸಿಎಯಲ್ಲಿ  ಚೇತರಿಸಿಕೊಳ್ಳುತ್ತಿದ್ದಾರೆ.  ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಅವರನ್ನು ಸ್ಟ್ಯಾಂಡ್‌ಬೈ ಎಂದು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಏಷ್ಯಾಕಪ್ ಭಾರತ  ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಕೆಎಲ್ ರಾಹುಲ್ ( ಉಪ ನಾಯಕ) ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೇಟ್ ಕೀಪರ್) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT