ಕ್ರಿಕೆಟ್

ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

Lingaraj Badiger

ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ. 

ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಟೀಂ ಇಂಡಿಯಾಕ್ಕೆ ಬಂಗಾರದ ಪದಕ ಕೈತಪ್ಪಿತ್ತು.

SCROLL FOR NEXT