ವಿನೋದ್ ಕಾಂಬ್ಳಿ 
ಕ್ರಿಕೆಟ್

ಬಿಸಿಸಿಐ ನೀಡುವ ಪಿಂಚಣಿಯಿಂದಲೇ ಜೀವನ, ಸಚಿನ್ ಗೆ ಎಲ್ಲವೂ ಗೊತ್ತು, ಅವರಿಂದ ಏನನ್ನೂ ನಿರೀಕ್ಷಿಸಲಾರೆ; ವಿನೋದ್ ಕಾಂಬ್ಳಿ

ತಿಂಗಳಿಗೆ 30 ಸಾವಿರ ಪಿಂಚಣಿ ಬರುತ್ತಿದ್ದು, ಇದರೊಂದಿಗೆ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ ಎಂದು  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ನೋವು ಹಂಚಿಕೊಂಡಿದ್ದಾರೆ.

ಮುಂಬಯಿ: ನಾನು ನಿರುದ್ಯೋಗಿಯಾಗಿದ್ದೇನೆ, ನಮ್ಮ ಕುಟುಂಬವು ಬಿಸಿಸಿಐ ನೀಡುವ ಪಿಂಚಣಿಯಿಂದ ಬದುಕು ಸಾಗಿಸುತ್ತಿದೆ. ತಿಂಗಳಿಗೆ 30 ಸಾವಿರ ಪಿಂಚಣಿ ಬರುತ್ತಿದ್ದು, ಇದರೊಂದಿಗೆ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ ಎಂದು  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ನೋವು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಕಾಂಬ್ಳಿ, ನಾನು ಈ ಹಿಂದೆ  ಸಚಿನ್ ತೆಂಡೂಲ್ಕರ್ ಅವರ ಮಿಡ್ಲ್ಸೆಕ್ಸ್ ಗ್ಲೋಬಲ್ ಅಕಾಡೆಮಿಯಲ್ಲಿ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದೆ. ನಾನು ಪ್ರತಿದಿನ ಬೆಳಗ್ಗೆ 5 ಗಂಟೆಗೆ ಏಳುತ್ತಿದ್ದೆ. ಇದಾದ ಬಳಿಕ ಡಿವೈ ಪಾಟೀಲ್ ಕ್ರೀಡಾಂಗಣಕ್ಕೆ ಕ್ಯಾಬ್​ನಲ್ಲಿ ಹೋಗುತ್ತಿದ್ದೆ. ಅಲ್ಲದೆ ಸಂಜೆಯವರೆಗೆ ಬಿಕೆಸಿ ಗ್ರೌಂಡ್ ನಲ್ಲಿ ಕೋಚಿಂಗ್ ಕೊಡುತ್ತಿದ್ದೆ. ಇದು ನನಗೆ ತುಂಬಾ ಬೇಸರದ ದಿನಚರಿಯಾಗಿತ್ತು ಎಂದು ಕಾಂಬ್ಳಿ ತಿಳಿಸಿದ್ದಾರೆ.

ನನ್ನ ಪರಿಸ್ಥಿತಿಯ ಬಗ್ಗೆ ಸಚಿನ್‌ಗೆ ಎಲ್ಲವೂ ಗೊತ್ತು. ಆದರೆ ನಾನು ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ತೆಂಡೂಲ್ಕರ್ ನನಗೆ ಮಿಡ್ಲ್ಸೆಕ್ಸ್ ಗ್ಲೋಬಲ್ ಅಕಾಡೆಮಿಯಲ್ಲಿ ಕೆಲಸ ನೀಡಿದರು. ಅದರಿಂದ ನಾನು ತುಂಬಾ ಸಂತೋಷಪಟ್ಟಿದ್ದೆ. ಆತ ನನಗೆ ಬಹಳ ಒಳ್ಳೆಯ ಸ್ನೇಹಿತ. ಅವರು ಯಾವಾಗಲೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿನೋದ್ ಕಾಂಬ್ಳಿ ತಿಳಿಸಿದ್ದಾರೆ.

ನಾನು ಯುವ ಆಟಗಾರರಿಗೆ ಸಹಾಯ ಮಾಡುವಂತಹ ಕೆಲಸವನ್ನು ನಿರ್ವಹಿಸಲು ಬಯಸುತ್ತೇನೆ. ನಾನು ನನ್ನ ಕುಟುಂಬದ ಜೀವನ ನಿರ್ವಹಣೆಗೆ ಹಣ ಬೇಕಾಗಿದೆ, ನನಗೆ ಮಾಡಲು ಕೆಲಸ ಬೇಕು ಎಂದು ಕಾಂಬ್ಳಿ ತಿಳಿಸಿದ್ದಾರೆ.

ಅಮೋಲ್ ಮಜುಂದಾರ್ ಮುಂಬೈ ತಂಡದ ಮುಖ್ಯ ಕೋಚ್ ಎಂದು ನನಗೆ ತಿಳಿದಿದೆ. ನಾವೆಲ್ಲರೂ ಜೊತೆಯಾಗಿ ಆಡಿದ ಆಟಗಾರರು. ಹೀಗಾಗಿ ಅವರಿಗೆ ಸಹಾಯ ಮಾಡಲು ನಾನು ಸದಾ ಸಿದ್ದನಾಗಿದ್ದೇನೆ ಎಂದು ವಿನೋದ್ ಕಾಂಬ್ಳಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT