ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಜಿಂಬಾಬ್ವೆ ವಿರುದ್ಧ ಮೂರನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಕಳೆದ ಒಂಬತ್ತು ವರ್ಷಗಳಲ್ಲಿ ಜಿಂಬಾಬ್ವೆಯಲ್ಲಿ ಒಂದು ಏಕದಿನ ಪಂದ್ಯದಲ್ಲೂ ಸೋಲು ಕಾಣದ ಟೀಂ ಇಂಡಿಯಾ, ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲೂ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಈಗಾಗಲೇ ಸರಣಿಯನ್ನು ಕೈ ವಶ ಮಾಡಿಕೊಂಡಿದೆ.

ಹರಾರೆ: ಕಳೆದ ಒಂಬತ್ತು ವರ್ಷಗಳಲ್ಲಿ ಜಿಂಬಾಬ್ವೆಯಲ್ಲಿ ಒಂದು ಏಕದಿನ ಪಂದ್ಯದಲ್ಲೂ ಸೋಲು ಕಾಣದ ಟೀಂ ಇಂಡಿಯಾ, ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲೂ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 
ಈಗಾಗಲೇ ಸರಣಿಯನ್ನು ಕೈ ವಶ ಮಾಡಿಕೊಂಡಿದೆ. ಇದೇ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ವೈಟ್ ವಾಶ್ ಮಾಡುವ ಗುರಿ ಹೊಂದಿದೆ. 

ಟೀಂ ಇಂಡಿಯಾ ನಾಯಕ ಕೆ.ಎಲ್. ರಾಹುಲ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಆಡದ ದೀಪಕ್ ಚಹರ್ ಇಂದಿನ ಪಂದ್ಯದಲ್ಲಿ ಆಡಲಿದ್ದಾರೆ. ಮತ್ತೊಂದೆಡೆ ರೆಗಿಸ್ ಚಕಬ್ವಾ ಪಡೆ ಇಂದಿನ ಪಂದ್ಯದಲ್ಲಿ ಗೆದ್ದು ಮಾನ ಉಳಿಸಿಕೊಳ್ಳಲು ಹೋರಾಡುವ ಸಾಧ್ಯತೆಯಿದೆ.

ಟಾಸ್ ಗೆದ್ದ ಬಳಿಕ ಮಾತನಾಡಿದ ಕೆ.ಎಲ್. ರಾಹುಲ್, ಮೊದಲಿಗೆ ಚೆನ್ನಾಗಿ ಬ್ಯಾಟಿಂಗ್ ಮಾಡಬೇಕು, ಅದು ಮಾತ್ರ ನಮ್ಮ ಮುಂದಿರುವ ಸವಾಲು. ಕಳೆದ ಕೆಲವು ಸೀಸನ್ ಗಳಲ್ಲಿ ಸಿರಾಜ್  ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಏಕದಿನ ಪಂದ್ಯದಲ್ಲೂ ಉತ್ತಮ ಫಾರ್ಮ್ ನಲ್ಲಿದ್ದಾರೆ. ಇಂದಿನ ಪಂದ್ಯದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದ್ದು, ಸಿರಾಜ್, ಪ್ರಸಿದ್ಧ್ ಕೃಷ್ಣ ತಂಡದಿಂದ ಹೊರಗಿದ್ದು, ದೀಪಕ್ ಚಾಹರ್ ಮತ್ತು ಅವೇಶ್ ಖಾನ್ ತಂಡ ಸೇರಿದ್ದಾರೆ ಎಂದು ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭವಿಷ್ಯ ಕಾಣುತ್ತಿಲ್ಲ'; ಬಿಜೆಪಿ ನಾಯಕತ್ವ ಭೇಟಿ ಮಾಡಿದ Annamalai; ಸ್ವತಂತ್ರ ರಾಜಕೀಯ ಪಯಣದ ಸುಳಿವು!

ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ; ರಾಜ್ಯದ ಇತಿಹಾಸದಲ್ಲೇ ಮೊದಲು!

IPL 2026: RCB ಐತಿಹಾಸಿಕ ಗೆಲುವಿನ ನಂತರ ಕೊಹ್ಲಿ, ಅನುಷ್ಕಾರಿಂದ ಪ್ರೇಮಾನಂದ ಗುರೂಜಿ ಭೇಟಿ; ಇಲ್ಲಿದೆ ಕಾರಣ

ಮಹಾರಾಷ್ಟ್ರದಲ್ಲಿ ಶಿವಸೇನೆಯಂತೆ ವಿಭಜನೆಯತ್ತ ಸಾಗುತ್ತಿದೆ TMC!

‘Kala Hiran’ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಸಲ್ಮಾನ್ ಖಾನ್ ! ಬೆದರಿಸುವ ತಂತ್ರ ಎಂದ ನಿರ್ಮಾಪಕರು ಏನಿದು ವಿವಾದ?

SCROLL FOR NEXT