ವಿಕೆಟ್ ಸಂಭ್ರಮದಲ್ಲಿ ರವೀಂದ್ರ ಜಡೇಜಾ 
ಕ್ರಿಕೆಟ್

ಏಷ್ಯಾಕಪ್ 2022: ಹಾಂಗ್ ಕಾಂಗ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ದುಬೈ; ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಭಾರತ ನೀಡಿದ 193 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಹಾಂಗ್ ಕಾಂಗ್ ತಂಡ ನಿಗದಿತ 20 ಓವರ್ ಗಳಲ್ಲಿ 152ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 40 ರನ್ ಗಳ ಅಂತರದ ಹೀನಾಯ ಸೋಲು ಕಂಡಿದೆ.

ಬೃಹತ್ ಗುರಿಯನ್ನು ಬೆನ್ನು ಹತ್ತಿದ ಹಾಂಗ್ ಕಾಂಗ್ ಆರಂಭಿಕ ಆಘಾತ ಎದುರಿಸಿತು. 9 ರನ್ ಗಳಿಸಿದ್ದ ಯಾಸಿಮ್ ಮುರ್ತಾಜಾ ಅರ್ಶ್ ದೀಪ್ ಸಿಂಗ್ ಬೌಲಿಂಗ್ ನಲ್ಲಿ ಔಟಾದರು. ಈ ಆಘಾತದಿಂದ ಹಾಂಗ್ ಕಾಂಗ್ ತಂಡವನ್ನು ಬಾಬರ್ ಹಯಾತ್ ತಮ್ಮ ಸಮಯೋಚಿತ ಬ್ಯಾಟಿಂಗ್ ನಿಂದ ಹೊರತಂದರು. ಈ ಹಂತದಲ್ಲಿ 10 ರನ್ ಗಳಿಸಿದ್ದ ನಾಯಕ ನಿಜಾಕತ್ ಖಾನ್ ಔಟಾದರು. ಬಳಿಕ 41 ರನ್ ಗಳಿಸಿದ್ದ ಬಾಬರ್ ಹಯಾತ್ ಕೂಡ ಜಡೇಜಾ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.

30 ರನ್ ಗಳಿಸಿದ್ದ ಕಿಂಚಿತ್ ಶಾ, 14ರನ್ ಗಳಿಸಿದ್ದ ಎಜಾಜ್ ಖಾನ್ ಆವೇಶ್ ಖಾನ್ ಬೌಲಿಂಗ್ ನಲ್ಲಿ ಔಟಾದರು. ಅಂತಿಮವಾಗಿ ಹಾಂಗ್ ಕಾಂಗ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152ರನ್ ಗಳಿಲಷ್ಟೇ ಶಕ್ತವಾಯಿತು. ಆ ಮೂಲಕ 40 ರನ್ ಗಳ ಅಂತರದಲ್ಲಿ ಹೀನಾಯ ಸೋಲುಕಂಡಿತು. ಈ ಪಂದ್ಯದ ಜಯದ ಮೂಲಕ ಭಾರತ ಟೂರ್ನಿಯಲ್ಲಿ ಸತತ 2ನೇ ಗೆಲುವು ಸಾಧಿಸಿದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT