ಜಯದೇವ್ ಉನಾದ್ಕತ್ 
ಕ್ರಿಕೆಟ್

ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ; ಗಾಯಾಳು ಶಮಿ ಬದಲಿಗೆ ಜಯದೇವ್ ಉನಾದ್ಕತ್ ಗೆ ಸ್ಥಾನ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. 

ಚಟ್ಟೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. 

ಭುಜದ ಗಾಯಕ್ಕೆ ತುತ್ತಾಗಿರುವ ಭಾರತದ ವೇಗಿ ಮಹಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಶಮಿ ಪ್ರಸ್ತುತ ಬೆಂಗಳೂರಿನಲ್ಲಿರುವ ಬಿಸಿಸಿಐನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಭುಜದ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಂಗ್ಲಾದೇಶ ಪ್ರವಾಸದ ಮೊದಲು ತರಬೇತಿ ಅವಧಿಯಲ್ಲಿ ಅವರು ಬಲ ಭುಜದ ಗಾಯಕ್ಕೆ ತುತ್ತಾಗಿದ್ದರು. ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲು ವಿಫಲರಾದ ಕಾರಣ ಶಮಿ ಅವರನ್ನು ಏಕದಿನ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ವೈದ್ಯರ ಸಲಹೆ ಮೇರೆಗೆ ಟೆಸ್ಟ್‌ ಸರಣಿಯಿಂದಲೂ ಅವರನ್ನು ಕೈ ಬಿಡಲಾಗಿದೆ.

ಅವರ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ರಾಜ್‌ಕೋಟ್‌ನಲ್ಲಿರುವ ಜಯದೇವ್ ಉನಾದ್ಕತ್ ಅವರು ತಮ್ಮ ವೀಸಾ ಅವಶ್ಯಕತೆಗಳನ್ನು ಪೂರ್ಣಗೊಳಿಸಲು ಕಾಯುತ್ತಿದ್ದಾರೆ ಮತ್ತು ಮುಂದಿನ ಒಂದೆರಡು ದಿನಗಳಲ್ಲಿ ಬಾಂಗ್ಲಾದೇಶಕ್ಕೆ ಪ್ರಯಾಣಿಸಲಿದ್ದು, ಚಟ್ಟೋಗ್ರಾಮ್‌ನಲ್ಲಿ ಟೆಸ್ಟ್ ತಂಡವನ್ನು ಸೇರುವ ಸಾಧ್ಯತೆಯಿದೆ. ಅವರು ಇತ್ತೀಚೆಗೆ ಸೌರಾಷ್ಟ್ರವನ್ನು ವಿಜಯ್ ಹಜಾರೆ ಪ್ರಶಸ್ತಿಗೆ ಮುನ್ನಡೆಸಿದ್ದರು.

ತಂಡಕ್ಕೆ ಸೇರ್ಪಡೆಯಾಗುತ್ತಿರುವ 2ನೇ ಬದಲೀ ಆಟಗಾರ
ಇನ್ನು ಹಾಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಉನಾದ್ಕತ್ ತಂಡಕ್ಕೆ ಸೇರ್ಪಡೆಯಾಗುತ್ತಿರುವ 2ನೇ ಆಟಗಾರರಾಗಿದ್ದಾರೆ. ಈ ಹಿಂದೆ 2ನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ನಾಯಕ ರೋಹಿತ್ ಶರ್ಮಾ ಅವರ ಬದಲಿಗೆ ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಕೂಡ ರವೀಂದ್ರ ಜಡೇಜಾಗೆ ಸಂಭಾವ್ಯ ಬದಲಿ ಆಟಗಾರನಾಗಿದ್ದಾರೆ. ಇದೀಗ ಉನಾದ್ಕತ್ ಶಮಿ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ದೊಡ್ಡ ದಾಖಲೆ ನಿರ್ಮಿಸಿದ Virat Kohli

IPL 2026: ಕನ್ನಡಿಗ KL Rahul, ಪೊರೆಲ್ ಭರ್ಜರಿ ಬ್ಯಾಟಿಂಗ್, RR ವಿರುದ್ಧ DCಗೆ 5 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಕನಸಿಗೆ ಭಾರಿ ಪೆಟ್ಟು!

SCROLL FOR NEXT