ಟೀಂ ಇಂಡಿಯಾ 
ಕ್ರಿಕೆಟ್

ಬಾಂಗ್ಲಾ ವಿರುದ್ಧ ಭಾರತ ಅಜೇಯ ಓಟ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪ್ರವೇಶಕ್ಕೆ ಗೆಲ್ಲಲೇಬೇಕು ಟೆಸ್ಟ್ ಸರಣಿ?

ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತ ಸೋಲಿಲ್ಲದ ಸರದಾರ ತಂಡವಾಗಿದೆ. ಇನ್ನು ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಢಾಕಾ: ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತ ಸೋಲಿಲ್ಲದ ಸರದಾರ ತಂಡವಾಗಿದೆ. ಇನ್ನು ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಮೊದಲ ಪಂದ್ಯ ಡಿಸೆಂಬರ್ 14ರಿಂದ ಚಟ್ಟೋಗ್ರಾಮ್‌ನಲ್ಲಿ ನಡೆಯಲಿದೆ. ದಾಖಲೆಯ ವಿಷಯವೆಂದರೆ ಭಾರತವು ತವರು ಮತ್ತು ವಿದೇಶ ಎರಡರಲ್ಲೂ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಆದಾಗ್ಯೂ, ಈ ಸರಣಿಯು ಕೆಎಲ್ ರಾಹುಲ್ ನೇತೃತ್ವದ ಭಾರತಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಮುಂದಿನ ವರ್ಷ ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶಿಸುವ ಭರವಸೆಯನ್ನು ಜೀವಂತವಾಗಿರಿಸಲು ಭಾರತ ಸರಣಿಯನ್ನು 2-0 ಅಂತರದಿಂದ ಗೆಲ್ಲಬೇಕಾಗಿದೆ. 

ಭಾರತವು ಬಾಂಗ್ಲಾದೇಶದ ವಿರುದ್ಧ ಒಂದೇ ಒಂದು ಪಂದ್ಯ ಡ್ರಾ ಆದರೂ ಸಂಕಷ್ಟಕ್ಕೆ ಬೀಳಲಿದೆ. ಭಾರತವು ನಿರೀಕ್ಷಿತ ಸಾಲಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ನಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಟೀಂ ಇಂಡಿಯಾ ತವರು ಅಥವಾ ವಿದೇಶವಾಗಿರಬಹುದು. ಅಜೇಯ ಓಟ ಮುಂದುವರೆಸಿದೆ.

2000ರಿಂದ ಉಭಯ ದೇಶಗಳ ನಡುವೆ ಒಟ್ಟಾರೆ 11 ಟೆಸ್ಟ್ ಪಂದ್ಯಗಳಲ್ಲಿ ಭಾರತ 9ರಲ್ಲಿ ಜಯ ಸಾಧಿಸಿದೆ. ಬಾಂಗ್ಲಾದೇಶ ಇನ್ನೂ ಭಾರತದ ವಿರುದ್ಧ ಚೊಚ್ಚಲ ಟೆಸ್ಟ್ ಗೆಲುವಿಗಾಗಿ ತಿಣುಕಾಡುತ್ತಿದೆ. ಆದರೆ ಒಂದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಈ ಹಿಂದೆ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾದೇಶಕ್ಕೆ ಇದೀಗ ತವರಿನಲ್ಲಿ ನಡೆಯುತ್ತಿರುವ ಸರಣಿ ಉತ್ತಮ ಅವಕಾಶವಾಗಿದೆ. ಭಾರತದ ವಿರುದ್ಧದ ಅವರ ಇತ್ತೀಚಿನ ODI ಸರಣಿಯ ಗೆಲುವನ್ನು ಗಮನಿಸಿದರೆ, ಬಾಂಗ್ಲಾ ಆಟಗಾರರು ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿದ್ದಾರೆ. ಇದು 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತದ ಹಾದಿಯನ್ನು ನುಚ್ಚುನೂರು ಮಾಡಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT