ಟೀಂ ಇಂಡಿಯಾ 
ಕ್ರಿಕೆಟ್

ಬಾಂಗ್ಲಾ ವಿರುದ್ಧ ಭಾರತ ಅಜೇಯ ಓಟ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪ್ರವೇಶಕ್ಕೆ ಗೆಲ್ಲಲೇಬೇಕು ಟೆಸ್ಟ್ ಸರಣಿ?

ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತ ಸೋಲಿಲ್ಲದ ಸರದಾರ ತಂಡವಾಗಿದೆ. ಇನ್ನು ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಢಾಕಾ: ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತ ಸೋಲಿಲ್ಲದ ಸರದಾರ ತಂಡವಾಗಿದೆ. ಇನ್ನು ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಮೊದಲ ಪಂದ್ಯ ಡಿಸೆಂಬರ್ 14ರಿಂದ ಚಟ್ಟೋಗ್ರಾಮ್‌ನಲ್ಲಿ ನಡೆಯಲಿದೆ. ದಾಖಲೆಯ ವಿಷಯವೆಂದರೆ ಭಾರತವು ತವರು ಮತ್ತು ವಿದೇಶ ಎರಡರಲ್ಲೂ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಆದಾಗ್ಯೂ, ಈ ಸರಣಿಯು ಕೆಎಲ್ ರಾಹುಲ್ ನೇತೃತ್ವದ ಭಾರತಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಮುಂದಿನ ವರ್ಷ ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶಿಸುವ ಭರವಸೆಯನ್ನು ಜೀವಂತವಾಗಿರಿಸಲು ಭಾರತ ಸರಣಿಯನ್ನು 2-0 ಅಂತರದಿಂದ ಗೆಲ್ಲಬೇಕಾಗಿದೆ. 

ಭಾರತವು ಬಾಂಗ್ಲಾದೇಶದ ವಿರುದ್ಧ ಒಂದೇ ಒಂದು ಪಂದ್ಯ ಡ್ರಾ ಆದರೂ ಸಂಕಷ್ಟಕ್ಕೆ ಬೀಳಲಿದೆ. ಭಾರತವು ನಿರೀಕ್ಷಿತ ಸಾಲಿನಲ್ಲಿ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ನಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಟೀಂ ಇಂಡಿಯಾ ತವರು ಅಥವಾ ವಿದೇಶವಾಗಿರಬಹುದು. ಅಜೇಯ ಓಟ ಮುಂದುವರೆಸಿದೆ.

2000ರಿಂದ ಉಭಯ ದೇಶಗಳ ನಡುವೆ ಒಟ್ಟಾರೆ 11 ಟೆಸ್ಟ್ ಪಂದ್ಯಗಳಲ್ಲಿ ಭಾರತ 9ರಲ್ಲಿ ಜಯ ಸಾಧಿಸಿದೆ. ಬಾಂಗ್ಲಾದೇಶ ಇನ್ನೂ ಭಾರತದ ವಿರುದ್ಧ ಚೊಚ್ಚಲ ಟೆಸ್ಟ್ ಗೆಲುವಿಗಾಗಿ ತಿಣುಕಾಡುತ್ತಿದೆ. ಆದರೆ ಒಂದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಈ ಹಿಂದೆ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾದೇಶಕ್ಕೆ ಇದೀಗ ತವರಿನಲ್ಲಿ ನಡೆಯುತ್ತಿರುವ ಸರಣಿ ಉತ್ತಮ ಅವಕಾಶವಾಗಿದೆ. ಭಾರತದ ವಿರುದ್ಧದ ಅವರ ಇತ್ತೀಚಿನ ODI ಸರಣಿಯ ಗೆಲುವನ್ನು ಗಮನಿಸಿದರೆ, ಬಾಂಗ್ಲಾ ಆಟಗಾರರು ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿದ್ದಾರೆ. ಇದು 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತದ ಹಾದಿಯನ್ನು ನುಚ್ಚುನೂರು ಮಾಡಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT