ಭಾರತ ತಂಡಕ್ಕೆ ಜಯ 
ಕ್ರಿಕೆಟ್

ಮೊದಲ ಟೆಸ್ಟ್: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 188ರನ್ ಗಳ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯವನ್ನು ಭಾರತ 188 ರನ್‌ಗಳಿಂದ ಭರ್ಜರಿಯಾಗಿ ಗೆದ್ದಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.

ಚತ್ತೊಗ್ರಾಮ್: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯವನ್ನು ಭಾರತ 188 ರನ್‌ಗಳಿಂದ ಭರ್ಜರಿಯಾಗಿ ಗೆದ್ದಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.

ಚತ್ತೊಗ್ರಾಮ್ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ನೀಡಿದ 513 ರನ್‌ಗಳ ಬೃಹತ್‌ ಮೊತ್ತವನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 324 ರನ್‌ಗಳಿಗೆ ಆಲೌಟ್‌ ಆಯಿತು. ಆ ಮೂಲಕ ಭಾರತ 188 ರನ್‌ಗಳಿಂದ ಪಂದ್ಯ ಗೆದ್ದಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 133.05 ಓವರ್‌ಗಳಲ್ಲಿ 404 ರನ್‌ ಗಳಿಸಿ ಆಲೌಟ್‌ ಆಗಿತ್ತು. ಇದಕ್ಕೆ ಪ್ರತಿಯಾಗಿ ಬಾಂಗ್ಲಾ ತಂಡ 55.5 ಓವರ್‌ಗಳಲ್ಲಿ ಕೇವಲ 150 ರನ್‌ ಗಳಿಸಿ ಸರ್ವ ಪತನ ಕಂಡಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ 61.4 ಓವರ್‌ ಆಡಿ ಎರಡು ವಿಕೆಟ್‌ ನಷ್ಟದೊಂದಿಗೆ 258 ರನ್‌ ಗಳಿಸಿದ್ದ ಭಾರತ ಇನ್ನಿಂಗ್ಸ್ ಡಿಕ್ಲೇರ್‌ ಮಾಡಿಕೊಂಡು, ಬಾಂಗ್ಲಾ ತಂಡಕ್ಕೆ 513 ರನ್‌ಗಳ ಗುರಿ ನೀಡಿತ್ತು.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಪರ 90 ರನ್‌ ಗಳಿಸಿದ ಪೂಜಾರ ಮಿಂಚಿದ್ದರು. ಬೌಲಿಂಗ್‌ನಲ್ಲಿ ಕುಲದೀಪ್‌ ಯಾದವ್‌ 5 ವಿಕೆಟ್‌ ಗಳಿಸಿ ಗಮನ ಸೆಳೆದಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಬ್ಯಾಟರ್‌ಗಳಾದ ಶುಭಮನ್‌ ಗಿಲ್‌ 110, ಚೇತೇಶ್ವರ ಪೂಜಾರ 102 ರನ್‌ ಸಿಡಿಸಿದ್ದು ಪಂದ್ಯದ ಮತ್ತೊಂದು ವಿಶೇಷವಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾ ಬ್ಯಾಟರ್‌ ಜಾಕಿರ್‌ ಹುಸೇನ್‌ 100 ಗಳಿಸಿ ಗಮನಾರ್ಹ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಪ್ರಭಾವಿ ಬೌಲಿಂಗ್ ಮಾಡಿ 9 ವಿಕೆಟ್ ಕಬಳಿಸಿದ ಕುಲದೀಪ್ ಯಾದವ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

2-1 ಅಂತರದಿಂದ ಏಕದಿನ ಸರಣಿಯನ್ನು ಗೆದ್ದಿದ್ದ ಬಾಂಗ್ಲಾ, ಟೆಸ್ಟ್‌ ಸರಣಿಯಲ್ಲಿ 1-0 ಅಂತರದ ಹಿನ್ನಡೆ ಕಂಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT