ರೋಹಿತ್ ಶರ್ಮಾ ಮತ್ತು ನವದೀಪ್ ಸೈನಿ 
ಕ್ರಿಕೆಟ್

IND vs BAN: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಿಂದ ರೋಹಿತ್ ಶರ್ಮಾ, ವೇಗದ ಬೌಲರ್ ನವದೀಪ್ ಸೈನಿ ಔಟ್

ಬಾಂಗ್ಲಾದೇಶದ ವಿರುದ್ಧ ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಹೊರಗುಳಿದಿದ್ದಾರೆ.

ಮುಂಬೈ: ಬಾಂಗ್ಲಾದೇಶದ ವಿರುದ್ಧ ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಹೊರಗುಳಿದಿದ್ದಾರೆ.

ಢಾಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರೋಹಿತ್ ಎಡಗೈ ಹೆಬ್ಬೆರಳಿಗೆ ಗಾಯವಾದ ಹಿನ್ನೆಲೆಯಲ್ಲಿ ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ.

ಗಾಯವಾದ ನಂತರ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಿಂದಲೂ ಹೊರಗುಳಿದಿದ್ದರು.

ರೋಹಿತ್ ಶರ್ಮಾ ಅವರು ಪೂರ್ಣ ಪ್ರಮಾಣದಲ್ಲಿ ಬ್ಯಾಟಿಂಗ್ ಮತ್ತು ಫೀಲ್ಡಿಂಗ್‌ ಮಾಡುವ ಮುನ್ನ ಗಾಯವು ಸಂಪೂರ್ಣವಾಗಿ ಗುಣವಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ವೈದ್ಯಕೀಯ ತಂಡವು ಹೇಳಿದೆ. ಹೀಗಾಗಿ, ರೋಹಿತ್ ತಮ್ಮ ವಿಶ್ರಾಂತಿಯನ್ನು ಮುಂದುವರಿಸುತ್ತಾರೆ ಮತ್ತು ಬಾಂಗ್ಲಾದೇಶ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್‌ಗೆ ಲಭ್ಯವಿರುವುದಿಲ್ಲ.

ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದಾಗಿ ವೇಗದ ಬೌಲರ್ ನವದೀಪ್ ಸೈನಿ ಕೂಡ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ವೇಗದ ಬೌಲರ್ ಈಗ ಗಾಯದ ಹೆಚ್ಚಿನ ನಿರ್ವಹಣೆಗಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ) ವರದಿ ಮಾಡಲಿದ್ದಾರೆ ಎಂದು ಬಿಸಿಸಿಐ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್‌ಗೆ ನವೀಕರಿಸಿದ ಭಾರತ ತಂಡ

ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ವಿಸಿ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ಡಬ್ಲ್ಯುಕೆ), ಕೆಎಸ್ ಭರತ್ (ಡಬ್ಲ್ಯುಕೆ), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಭ್ ಕುಮಾರ್, ಜಯದೇವ್ ಉನದ್ಕತ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT